ಮೈಸೂರು ನಗರ

ನಾನು ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು: ಪರಿಷತ್ ಸದಸ್ಯ ಕೆ ಶಿವಕುಮಾರ್

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.

ಈ ಕುರಿತು ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಎಲ್ಲಾ ದಲಿತ ರಾಜಕಾರಣಿಗಳ ಬಗ್ಗೆ ಓದಿದ್ದೇನೆ. ಎಲ್ಲರನ್ನೂ ಹತ್ತಿರದಿಂದ ನೋಡಿದ್ದೇನೆ. ಸಿದ್ದರಾಮಯ್ಯ ಅವರು ದಲಿತರಿಗೆ ನೀಡಿರುವ ಕಾರ್ಯಕ್ರಮ ಅಷ್ಟೊಂದಿದೆ. ಸಿದ್ದರಾಮಯ್ಯ 2018ರಲ್ಲಿ ಸೋಲಲು ದಲಿತರಿಗೆ ನೀಡಿದ ಕಾರ್ಯಕ್ರಮಗಳೇ ಕಾರಣ. ದಲಿತರಿಗೆ ನೀಡಿದ ಕಾರ್ಯಕ್ರಮ ನೋಡಿ ಬೇರೆಯವರೆಲ್ಲ ಉರಿದುಕೊಂಡು ವಿರುದ್ಧವಾಗಿ ಮತ ಹಾಕಿದರು. ನನ್ನನ್ನು ದಲಿತ ಕೋಟಾದಲ್ಲಿ ಪರಿಷತ್ ಸದಸ್ಯ ಮಾಡಲಿಲ್ಲ. ಆ ರೀತಿ ಮಾಡಿದ್ದರೆ ತುಂಬಾ ನೊಂದುಕೊಂಡು ಬಿಡುತ್ತಿದ್ದೆ. ನಾನು ಬಾಲ್ಯದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದರೆ ನನ್ನ ಬಾಲ್ಯ ಕ್ರೂರವಾಗಿರುತ್ತಿರಲಿಲ್ಲ. ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು ನಾನು. ಸಿಎಂ ಎರಡೂವರೆ ವರ್ಷ ಮುಗಿಸಿದ್ದಾರೆ. ನೀವು ಹೋದ ಮೇಲೆ ಬೇರೆಯವರು ದಲಿತರ ಪರ‌ ಕೆಲಸ ಮಾಡುತ್ತಾರೆ ಅನ್ನೋ ನಂಬಿಕೆ ಇಲ್ಲ. ದಯಮಾಡಿ ಬ್ಯಾಕ್ ಲಾಗ್ ಹುದ್ದೆ ಹಾಗೂ ದಲಿತರಿಗೆ ಜಮೀನು ದಾಖಲಾತಿ ಕೊಡಿಸಿ. ಎಲ್ಲಾ ವಿವಿಗಳಲ್ಲಿ ಬುದ್ದಿಸಂನಲ್ಲಿ ಪದವಿ ಮಾಡಬೇಕು. ಇದು ಮಾಡದಿದ್ದರೆ ಆರ್‌ಎಸ್‌ಎಸ್ ತಡೆಯಲು ಆಗುವುದಿಲ್ಲ. ಬುದ್ದಿಸಂ ಕಲಿಸದಿದ್ದರೆ ಆರ್‌ಎಸ್‌ಎಸ್ ಬಗ್ಗು ಬಡಿಯಲು ಸಾಧ್ಯವಿಲ್ಲ. ಎಲ್ಲರನ್ನೂ ವೈಚಾರಿಕವಾಗಿ ಬೆಳೆಸಲು ಬುದ್ದಿಸಂ ಕಲಿಸಬೇಕು. ತಂದೆ ತಾಯಿ ಎಲ್ಲರ ಮೇಲೆ‌ ಆಣೆ ಮಾಡಿ ಹೇಳುತ್ತೇನೆ, ನಾನು ಭ್ರಷ್ಟಾಚಾರ ಮಾಡುವುದಿಲ್ಲ. ಸಿದ್ದರಾಮಯ್ಯ ಮಹದೇವಪ್ಪ ಅವರಿಗೆ ಕೆಟ್ಟ ಹೆಸರು ತರುವ ಕೆಲಸ ಮಾಡುವುದಿಲ್ಲ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

3 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

16 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

16 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

16 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

17 hours ago