ಮೈಸೂರು ನಗರ

ನನ್ನ ಹೆಸರಿನಲ್ಲಿ ಈಶ್ವರ, ರಾಮ ಇಬ್ಬರು ಇದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಹಿಂದೂ ಕಾರ್ಯಕರ್ತರು ಟಾರ್ಗೆಟ್ ಆಗುತ್ತಿದ್ದಾರೆ ಎಂಬ ವಿಪಕ್ಷಗಳ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಬಿಜೆಪಿ ನಾಯಕರ ಮೇಲೆ ಎಫ್‌ಐಆರ್‌ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ, ರಾಮ ಇಬ್ಬರು ಇದ್ದಾರೆ. ಬಿಜೆಪಿ ನಾಯಕರು ಪ್ರಚೋದನಕಾರಿ ಭಾಷಣ ಮಾಡ್ತಿದ್ದಾರೆ. ಅದಕ್ಕಾಗಿ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ನಾನು ಯಾರ ಮೇಲೂ ಎಫ್‌ಐಆರ್ ಹಾಕಿ ಎಂದು ಹೇಳಿಲ್ಲ. ಪೊಲೀಸರು ಅವರ ಕರ್ತವ್ಯ ಮಾಡುತ್ತಿದ್ದಾರೆ ಅಷ್ಟೇ ಎಂದು ಹೇಳಿದರು.

ಇದನ್ನು ಓದಿ: ದಸರಾ ಉದ್ಘಾಟಕರ ಬದಲಾವಣೆಗೆ ಕಾನೂನು ಸಮರ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು.!

ಇನ್ನು ಜಾತಿ ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇಂದ್ರ ಸರ್ಕಾರದವರು ಜಾತಿಗಣತಿ ಮಾಡ್ತಿದ್ದಾರೆ. ಒಂದು ಜಾತಿಯಿಂದ ಇನ್ನೊಂದು ಜಾತಿಗೆ ಮತಾಂತರ ಆದ್ರೆ ಅದನ್ನು ಸೇರಿಸಿ ಹಾಕ್ತಾರೆ ಈಗ ನಾನು ಹಿಂದೂ ಮುಸ್ಲಿಂಗೆ ಕನ್ವರ್ಟ್ ಆಗಿದ್ದೀನಿ ಅಂತ ಇಟ್ಟುಕೊಳ್ಳೋಣ ಧರ್ಮ ಬದಲಾವಣೆ ಆದ್ರೆ ಹಂಗೆ ಬರುತ್ತದೆ. ಅದರಲ್ಲಿ ಹೊಸ ಜಾತಿ ಅಂತ ಬರಲ್ಲ. ನಾನು ಎಲ್ಲೇ ಇರಲಿ ಮುಸ್ಲಿಂ ಕ್ರಿಶ್ಚಿಯನ್ ಯಾವ ಧರ್ಮದಲ್ಲಿ ಇದ್ರೂ ಅದೇ ಬರುತ್ತೆ. ಮತಾಂತರಗೊಳ್ಳೋದು ಅವರ ಇಷ್ಟ ಸಂವಿಧಾನದಲ್ಲಿ ಅದಕ್ಕೆ ಅವಕಾಶ ಇದೆ. ಬಿಜೆಪಿ ಅವ್ರು ಕೆಲವರು ಕನ್ವರ್ಷನ್ ಆಗಿದ್ದಾರೆ ಎಂದು ಹೇಳಿದರು.

ಇನ್ನು ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತನಿಖೆ ಅನಗತ್ಯ ವಿಳಂಬ ಆಗ್ತಿದೆ ಅಂತ ನನಗೇನೂ ಅನಿಸುತ್ತಿಲ್ಲ ಸರ್ಕಾರ ತನಿಖೆಯಲ್ಲಿ ತಲೆ ಹಾಕಲ್ಲ. ತನಿಖೆ ವಿಳಂಬ ಆಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

1 hour ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago