ಮೈಸೂರು: ಹಿಂದೂ ಕಾರ್ಯಕರ್ತರು ಟಾರ್ಗೆಟ್ ಆಗುತ್ತಿದ್ದಾರೆ ಎಂಬ ವಿಪಕ್ಷಗಳ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಬಿಜೆಪಿ ನಾಯಕರ ಮೇಲೆ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ, ರಾಮ ಇಬ್ಬರು ಇದ್ದಾರೆ. ಬಿಜೆಪಿ ನಾಯಕರು ಪ್ರಚೋದನಕಾರಿ ಭಾಷಣ ಮಾಡ್ತಿದ್ದಾರೆ. ಅದಕ್ಕಾಗಿ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ನಾನು ಯಾರ ಮೇಲೂ ಎಫ್ಐಆರ್ ಹಾಕಿ ಎಂದು ಹೇಳಿಲ್ಲ. ಪೊಲೀಸರು ಅವರ ಕರ್ತವ್ಯ ಮಾಡುತ್ತಿದ್ದಾರೆ ಅಷ್ಟೇ ಎಂದು ಹೇಳಿದರು.
ಇದನ್ನು ಓದಿ: ದಸರಾ ಉದ್ಘಾಟಕರ ಬದಲಾವಣೆಗೆ ಕಾನೂನು ಸಮರ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು.!
ಇನ್ನು ಜಾತಿ ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇಂದ್ರ ಸರ್ಕಾರದವರು ಜಾತಿಗಣತಿ ಮಾಡ್ತಿದ್ದಾರೆ. ಒಂದು ಜಾತಿಯಿಂದ ಇನ್ನೊಂದು ಜಾತಿಗೆ ಮತಾಂತರ ಆದ್ರೆ ಅದನ್ನು ಸೇರಿಸಿ ಹಾಕ್ತಾರೆ ಈಗ ನಾನು ಹಿಂದೂ ಮುಸ್ಲಿಂಗೆ ಕನ್ವರ್ಟ್ ಆಗಿದ್ದೀನಿ ಅಂತ ಇಟ್ಟುಕೊಳ್ಳೋಣ ಧರ್ಮ ಬದಲಾವಣೆ ಆದ್ರೆ ಹಂಗೆ ಬರುತ್ತದೆ. ಅದರಲ್ಲಿ ಹೊಸ ಜಾತಿ ಅಂತ ಬರಲ್ಲ. ನಾನು ಎಲ್ಲೇ ಇರಲಿ ಮುಸ್ಲಿಂ ಕ್ರಿಶ್ಚಿಯನ್ ಯಾವ ಧರ್ಮದಲ್ಲಿ ಇದ್ರೂ ಅದೇ ಬರುತ್ತೆ. ಮತಾಂತರಗೊಳ್ಳೋದು ಅವರ ಇಷ್ಟ ಸಂವಿಧಾನದಲ್ಲಿ ಅದಕ್ಕೆ ಅವಕಾಶ ಇದೆ. ಬಿಜೆಪಿ ಅವ್ರು ಕೆಲವರು ಕನ್ವರ್ಷನ್ ಆಗಿದ್ದಾರೆ ಎಂದು ಹೇಳಿದರು.
ಇನ್ನು ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತನಿಖೆ ಅನಗತ್ಯ ವಿಳಂಬ ಆಗ್ತಿದೆ ಅಂತ ನನಗೇನೂ ಅನಿಸುತ್ತಿಲ್ಲ ಸರ್ಕಾರ ತನಿಖೆಯಲ್ಲಿ ತಲೆ ಹಾಕಲ್ಲ. ತನಿಖೆ ವಿಳಂಬ ಆಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…