ಮೈಸೂರು: ಮುಡಾ ಹಗರಣ ಸಂಬಂಧ ನ್ಯಾಯಾಧೀಶರ ಮುಂದೆ ನಾನೇ ವಾದ ಮಂಡನೆ ಮಾಡಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಮುಡಾ ಹಗರಣ ಕುರಿತು ನ್ಯಾಯಾಲಯಕ್ಕೆ ಲೋಕಾಯುಕ್ತ ವರದಿ ಸಲ್ಲಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾನ್ಯ ನ್ಯಾಯಾಲಯ ವಾದ ಮಂಡಿಸಲು ನನಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ನ್ಯಾಯಧೀಶರ ಮುಂದೆ ನಾನೇ ವಾದ ಮಂಡಿಸಿದ್ದೇನೆ. ನಾನು ಮಾಡಿರುವ ಆರೋಪಗಳಿಗೆ ಸೂಕ್ತ ದಾಖಲೆ ದೊರಕಿಸಿ ವಾದ ಮಂಡಿಸಿದ್ದೇನೆ. ಲೋಕಾಯುಕ್ತ ನೀಡಿದ ವರದಿಯಲ್ಲಿದ್ದ ಲೋಪಗಳನ್ನು ಎತ್ತಿ ಹಿಡಿದಿದ್ದೇನೆ. ಮೂರು ದಿನಗಳ ಕಾಲ ನ್ಯಾಯಾಧೀಶರ ಮುಂದೆ ಲೋಕಾಯುಕ್ತ ವರದಿಯ ಸುಳ್ಳು ವರದಿಯ ಬಗ್ಗೆ ತಿಳಿಸಿದ್ದೇನೆ. ಮುಂದಿನ ತಿಂಗಳ ಏಪ್ರಿಲ್.3ರಂದು ನ್ಯಾಯಾಲಯ ಆದೇಶ ನೀಡಲಿದೆ. ಆದೇಶದಲ್ಲಿ ನನ್ನ ಅರ್ಜಿ ಪುರಸ್ಕೃತಗೊಂಡು, ಲೋಕಾಯುಕ್ತ ವರದಿ ತಿರಸ್ಕೃತವಾಗಲಿದೆ. ಆ ಮೂಲಕ ಆರೋಪಿಗೆ ತಕ್ಕ ಶಿಕ್ಷೆಯಾಗಲಿದೆ ಎನ್ನುವ ನಂಬಿಕೆ ನನ್ನಲ್ಲಿದೆ ಎಂದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…