ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮುಡಾ ಪ್ರಕರಣದ ಸಂಕಷ್ಟ ಎದುರಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಿಸಿದ್ದಾರೆ.
ನಗರದ ಕಲಾಮಂದಿರದಲ್ಲಿ ಇಂದು ಆಯೋಜಿಸಲಾಗಿದ್ದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿಗಣತಿ ವರದಿ ನನ್ನ ಕೈ ಸೇರಿದೆ. ನಾನು ಇನ್ನೂ ಅದನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಅದನ್ನು ನೋಡಿ ಸಚಿವ ಸಂಪುಟದಲ್ಲಿ ಚರ್ಚಿಸಿ ಆ ನಂತರ ಅದನ್ನು ಜಾರಿಗೆ ತರುತ್ತೇನೆ. ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ಜಾರಿ ನಮ್ಮ ಪಕ್ಷದ ಅಜೆಂಡಾವಾಗಿದೆ. ಹೀಗಾಗಿ ನಾನು ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಿಸಿದರು.
ಈಗಾಗಲೇ ಕೆಎಸ್ಸಿಬಿಸಿ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು ರಾಜ್ಯ ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಬಹು ನಿರೀಕ್ಷಿತ ವರದಿಯನ್ನು ಸಲ್ಲಿಸಿದ್ದಾರೆ. ವರದಿಯಲ್ಲಿ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳ ನಡುವೆ ಕೋಲಾಹಲವನ್ನು ಸೃಷ್ಠಿಸಿದೆ. ಜಾತಿಗಣತಿ ಸಮೀಕ್ಷೆಯ ಪ್ರಕಾರ ಲಿಂಗಾಯತ ಜನಸಂಖ್ಯೆ 65 ಲಕ್ಷ(10.9%) ಮತ್ತು ಒಕ್ಕಲಿಗರ ಜನಸಂಖ್ಯೆ 60 ಲಕ್ಷ(10%) ಇದ್ದಾರೆ ಎಂಬ ಮಾಹಿತಿ ವರದಿಯಲ್ಲಿ ಹೇಳಲಾಗಿದೆ.
ಈ ವರದಿಯ ಬಗ್ಗೆ ಪರ-ವಿರೋಧಗಳು ವ್ಯಕ್ತವಾಗಿದ್ದು, ಕೆಲವರು ಜಾರಿ ಮಾಡಲೇಬೇಕು ಎಂದು ಪಟ್ಟು ಹಿಡಿದ್ದಾರೆ. ಇನ್ನೂ ಕೆಲವರು ಇದನ್ನು ತಿರಸ್ಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇವೆಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ವರದಿಯನ್ನು ಜಾರಿ ಮಾಡುತ್ತೇನೆ ಎಂದು ಘೋಷಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…