I will inaugurate Dussehra as Chief Minister Siddaramaiah
ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿಯಿಂದ ದಸರಾ ಉದ್ಘಾಟನೆಯಾಗಲಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ನಾನೇ ಈ ಬಾರಿಯ ದಸರಾವನ್ನೂ ಉದ್ಘಾಟನೆ ಮಾಡುತ್ತೇನೆ. ಇದೇ ಸತ್ಯ. ನಾನೇ ದಸರಾ ಉದ್ಘಾಟಿಸುತ್ತೇನೆ ಎಂದು ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದರು.
ಇನ್ನು ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ನಾನು ಡಿಸಿಎಂ ಡಿಕೆಶಿ ಇಬ್ಬರೂ ಚೆನ್ನಾಗಿಯೇ ಇದ್ದೇವೆ. ಮುಂದೆಯೇ ಚೆನ್ನಾಗಿಯೇ ಇರುತ್ತೇವೆ ಎಂದು ಹೇಳುತ್ತಾ ಡಿಕೆಶಿ ಅವರ ಕೈ ಎತ್ತಿದರು. ಇಬ್ಬರೂ ಸಂತೋಷದಿಂದಲೇ ಮುಗುಳ್ನಗುತ್ತಾ ಒಗ್ಗಟ್ಟು ಪ್ರದರ್ಶಿಸಿದರು.
ಇನ್ನು ಸಿಎಂ ಬದಲಾವಣೆ ಬಗ್ಗೆ ಶ್ರೀರಾಮುಲು ಹೇಳಿಕೆಯಲ್ಲಿ ಹುರುಳಿಲ್ಲ. ನಮ್ಮ ಬಗ್ಗೆ ಮಾತನಾಡಲು ಶ್ರೀರಾಮುಲುಗೆ ನೈತಿಕತೆಯಿಲ್ಲ. ಶ್ರೀರಾಮುಲು ಎಷ್ಟು ಸಲ ಸೋತಿಲ್ಲ? ಆಗ ಅವರಿಗೆ ಅವರ ಭವಿಷ್ಯ ಗೊತ್ತಿರಲಿಲ್ಲವೇ?ನಮ್ಮ ಸರ್ಕಾರ ಬಂಡೆ ರೀತಿ ೫ ವರ್ಷ ಇರುತ್ತದೆ. ನಾನು, ಡಿಕೆಶಿ ಚೆನ್ನಾಗಿಯೇ ಇದ್ದೇವೆ. ಒಗ್ಗಟ್ಟಿನಿಂದಲೇ ಇದ್ದೇವೆ. ನಾವು ಯಾರ ಮಾತನ್ನೂ ಕೇಳಲ್ಲ ಎಂದು ಹೇಳಿದರು
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …