I will inaugurate Dussehra as Chief Minister Siddaramaiah
ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿಯಿಂದ ದಸರಾ ಉದ್ಘಾಟನೆಯಾಗಲಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ನಾನೇ ಈ ಬಾರಿಯ ದಸರಾವನ್ನೂ ಉದ್ಘಾಟನೆ ಮಾಡುತ್ತೇನೆ. ಇದೇ ಸತ್ಯ. ನಾನೇ ದಸರಾ ಉದ್ಘಾಟಿಸುತ್ತೇನೆ ಎಂದು ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದರು.
ಇನ್ನು ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ನಾನು ಡಿಸಿಎಂ ಡಿಕೆಶಿ ಇಬ್ಬರೂ ಚೆನ್ನಾಗಿಯೇ ಇದ್ದೇವೆ. ಮುಂದೆಯೇ ಚೆನ್ನಾಗಿಯೇ ಇರುತ್ತೇವೆ ಎಂದು ಹೇಳುತ್ತಾ ಡಿಕೆಶಿ ಅವರ ಕೈ ಎತ್ತಿದರು. ಇಬ್ಬರೂ ಸಂತೋಷದಿಂದಲೇ ಮುಗುಳ್ನಗುತ್ತಾ ಒಗ್ಗಟ್ಟು ಪ್ರದರ್ಶಿಸಿದರು.
ಇನ್ನು ಸಿಎಂ ಬದಲಾವಣೆ ಬಗ್ಗೆ ಶ್ರೀರಾಮುಲು ಹೇಳಿಕೆಯಲ್ಲಿ ಹುರುಳಿಲ್ಲ. ನಮ್ಮ ಬಗ್ಗೆ ಮಾತನಾಡಲು ಶ್ರೀರಾಮುಲುಗೆ ನೈತಿಕತೆಯಿಲ್ಲ. ಶ್ರೀರಾಮುಲು ಎಷ್ಟು ಸಲ ಸೋತಿಲ್ಲ? ಆಗ ಅವರಿಗೆ ಅವರ ಭವಿಷ್ಯ ಗೊತ್ತಿರಲಿಲ್ಲವೇ?ನಮ್ಮ ಸರ್ಕಾರ ಬಂಡೆ ರೀತಿ ೫ ವರ್ಷ ಇರುತ್ತದೆ. ನಾನು, ಡಿಕೆಶಿ ಚೆನ್ನಾಗಿಯೇ ಇದ್ದೇವೆ. ಒಗ್ಗಟ್ಟಿನಿಂದಲೇ ಇದ್ದೇವೆ. ನಾವು ಯಾರ ಮಾತನ್ನೂ ಕೇಳಲ್ಲ ಎಂದು ಹೇಳಿದರು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…