I will inaugurate Dussehra as Chief Minister Siddaramaiah
ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿಯಿಂದ ದಸರಾ ಉದ್ಘಾಟನೆಯಾಗಲಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ನಾನೇ ಈ ಬಾರಿಯ ದಸರಾವನ್ನೂ ಉದ್ಘಾಟನೆ ಮಾಡುತ್ತೇನೆ. ಇದೇ ಸತ್ಯ. ನಾನೇ ದಸರಾ ಉದ್ಘಾಟಿಸುತ್ತೇನೆ ಎಂದು ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದರು.
ಇನ್ನು ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ನಾನು ಡಿಸಿಎಂ ಡಿಕೆಶಿ ಇಬ್ಬರೂ ಚೆನ್ನಾಗಿಯೇ ಇದ್ದೇವೆ. ಮುಂದೆಯೇ ಚೆನ್ನಾಗಿಯೇ ಇರುತ್ತೇವೆ ಎಂದು ಹೇಳುತ್ತಾ ಡಿಕೆಶಿ ಅವರ ಕೈ ಎತ್ತಿದರು. ಇಬ್ಬರೂ ಸಂತೋಷದಿಂದಲೇ ಮುಗುಳ್ನಗುತ್ತಾ ಒಗ್ಗಟ್ಟು ಪ್ರದರ್ಶಿಸಿದರು.
ಇನ್ನು ಸಿಎಂ ಬದಲಾವಣೆ ಬಗ್ಗೆ ಶ್ರೀರಾಮುಲು ಹೇಳಿಕೆಯಲ್ಲಿ ಹುರುಳಿಲ್ಲ. ನಮ್ಮ ಬಗ್ಗೆ ಮಾತನಾಡಲು ಶ್ರೀರಾಮುಲುಗೆ ನೈತಿಕತೆಯಿಲ್ಲ. ಶ್ರೀರಾಮುಲು ಎಷ್ಟು ಸಲ ಸೋತಿಲ್ಲ? ಆಗ ಅವರಿಗೆ ಅವರ ಭವಿಷ್ಯ ಗೊತ್ತಿರಲಿಲ್ಲವೇ?ನಮ್ಮ ಸರ್ಕಾರ ಬಂಡೆ ರೀತಿ ೫ ವರ್ಷ ಇರುತ್ತದೆ. ನಾನು, ಡಿಕೆಶಿ ಚೆನ್ನಾಗಿಯೇ ಇದ್ದೇವೆ. ಒಗ್ಗಟ್ಟಿನಿಂದಲೇ ಇದ್ದೇವೆ. ನಾವು ಯಾರ ಮಾತನ್ನೂ ಕೇಳಲ್ಲ ಎಂದು ಹೇಳಿದರು
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…