I will inaugurate Dussehra as Chief Minister Siddaramaiah
ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿಯಿಂದ ದಸರಾ ಉದ್ಘಾಟನೆಯಾಗಲಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ನಾನೇ ಈ ಬಾರಿಯ ದಸರಾವನ್ನೂ ಉದ್ಘಾಟನೆ ಮಾಡುತ್ತೇನೆ. ಇದೇ ಸತ್ಯ. ನಾನೇ ದಸರಾ ಉದ್ಘಾಟಿಸುತ್ತೇನೆ ಎಂದು ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದರು.
ಇನ್ನು ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ನಾನು ಡಿಸಿಎಂ ಡಿಕೆಶಿ ಇಬ್ಬರೂ ಚೆನ್ನಾಗಿಯೇ ಇದ್ದೇವೆ. ಮುಂದೆಯೇ ಚೆನ್ನಾಗಿಯೇ ಇರುತ್ತೇವೆ ಎಂದು ಹೇಳುತ್ತಾ ಡಿಕೆಶಿ ಅವರ ಕೈ ಎತ್ತಿದರು. ಇಬ್ಬರೂ ಸಂತೋಷದಿಂದಲೇ ಮುಗುಳ್ನಗುತ್ತಾ ಒಗ್ಗಟ್ಟು ಪ್ರದರ್ಶಿಸಿದರು.
ಇನ್ನು ಸಿಎಂ ಬದಲಾವಣೆ ಬಗ್ಗೆ ಶ್ರೀರಾಮುಲು ಹೇಳಿಕೆಯಲ್ಲಿ ಹುರುಳಿಲ್ಲ. ನಮ್ಮ ಬಗ್ಗೆ ಮಾತನಾಡಲು ಶ್ರೀರಾಮುಲುಗೆ ನೈತಿಕತೆಯಿಲ್ಲ. ಶ್ರೀರಾಮುಲು ಎಷ್ಟು ಸಲ ಸೋತಿಲ್ಲ? ಆಗ ಅವರಿಗೆ ಅವರ ಭವಿಷ್ಯ ಗೊತ್ತಿರಲಿಲ್ಲವೇ?ನಮ್ಮ ಸರ್ಕಾರ ಬಂಡೆ ರೀತಿ ೫ ವರ್ಷ ಇರುತ್ತದೆ. ನಾನು, ಡಿಕೆಶಿ ಚೆನ್ನಾಗಿಯೇ ಇದ್ದೇವೆ. ಒಗ್ಗಟ್ಟಿನಿಂದಲೇ ಇದ್ದೇವೆ. ನಾವು ಯಾರ ಮಾತನ್ನೂ ಕೇಳಲ್ಲ ಎಂದು ಹೇಳಿದರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…