ಮೈಸೂರು ನಗರ

ಬಾನು ಮುಷ್ತಾಪ್‌ ಕ್ಷಮೆ ಕೇಳಿದಲ್ಲಿ ಕೇಸ್‌ ವಾಪಸ್‌ ಪಡೆಯುವೆ : ಪ್ರತಾಪ್‌ ಸಿಂಹ

ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರು ಮುಸ್ಲಿಂ ಎನ್ನುವ ಕಾರಣಕ್ಕಾಗಿ ಮೈಸೂರು ದಸರಾ ಉದ್ಘಾಟನೆಗೆ ವಿರೋಧ ಮಾಡುತ್ತಿಲ್ಲ. ಬದಲಾಗಿ ೨೦೨೩ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ ತಾಯಿಯ ಬಗ್ಗೆ ಆಡಿರುವ ಮಾತಿಗೆ ಕ್ಷಮೆ ಕೇಳಬೇಕು. ಕ್ಷಮೆ ಕೇಳಿದಲ್ಲಿ ನಾನು ಹಾಕಿರುವ ಕೇಸ್ ವಾಪಸ್ ಪಡೆಯುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ಹೈಕೋರ್ಟ್‌ನಲ್ಲಿ ಕಲಂ ೨೬ರ ಅಡಿ ಕೇಸ್ ಹಾಕಿದ್ದೇನೆ. ಇದರಲ್ಲಿ ಹಿಂದು ಧಾರ್ಮಿಕ ಪೂಜಾವಿಧಿ ವಿಧಾನಗಳ ಕುರಿತು ಹಾಗೂ ಸಂಪ್ರದಾಯಗಳ ವಿರುದ್ಧ ಕಂಡು ಬಂದರೆ ಪ್ರಶ್ನೆ ಮಾಡಬಹುದು ಎಂದು ಕಲಂ ೨೬ರಲ್ಲಿ ತಿಳಿಸಲಾಗಿದೆ. ಅದರಂತೆ ಕೇಸ್ ಹಾಕಿದ್ದೇನೆಯೇ ಹೊರತು ಇದರಲ್ಲಿ ಯಾವ ಬೇರೆ ಕಾರಣಗಳಿಲ್ಲ ಎಂದರು.

೨೦೨೩ರಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಆಡಿರುವ ಮಾತಿಗೆ ಕ್ಷಮೆ ಕೇಳಬೇಕು ಹಾಗೂ ದಸರಾ ಉದ್ಘಾಟನಾ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳ ಬಗ್ಗೆ ಸ್ಪಷ್ಟನೆ ಕೊಡಬೇಕು. ಹಾಗಾದರೆ ಮಾತ್ರ ನಾನು ಹಾಕಿರುವ ಕೇಸ್ ವಾಪಸ್ ಪಡೆಯುತ್ತೇನೆ ಎಂದು ಅವರು ಹೇಳಿದರು.

ಮುಸ್ಲಿಂ ಧರ್ಮದಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ. ಆದರೆ, ಹಿಂದು ಧಾರ್ಮಿಕ ಆಚರಣೆ ಬಗ್ಗೆ ಅವರ ಹಿಂದಿನ ಮಾತುಗಳು ಅವರಿಗಿರುವ ಭಾವನೆ ವ್ಯಕ್ತಪಡಿಸುತ್ತವೆ. ಹೀಗಾಗಿ ಅವರು ಸ್ಪಷ್ಟನೆ ನೀಡಬೇಕು ಎಂದು ಹೇಳಿದ ಪ್ರತಾಪ್ ಸಿಂಹ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಾವು ಜಾತ್ಯತೀತತೆಯ ಪಾಠ ಕಲಿಯಬೇಕಿಲ್ಲ. ಹಿಂದೂ ಧರ್ಮದ ಬಗ್ಗೆ ಈ ನೆಲದ ಕಾನೂನು ಹಾಗೂ ಸಂಸ್ಕೃತಿಯನ್ನು ಒಪ್ಪಿದವರಿಗೆ ನಾವು ಗೌರವ ಕೊಡುತ್ತೇವೆ ಎಂದರು.

ಏನೂ ಕೆಲಸವಿಲ್ಲದವರು ಇದನ್ನು ಮಾಡುತ್ತಾರೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ೨೦೨೩ರಲ್ಲಿ ಜನ ಸಾಹಿತ್ಯ ಸಮ್ಮೇಳನದಲ್ಲಿ ಬಾನು ಮುಷ್ತಾಕ್ ಮಾಡಿದ ಭಾಷಣ ನೀವು ಒಪ್ಪುತ್ತೀರಾ? ಈ ಬಗ್ಗೆ ತಮ್ಮ ಅಪ್ಪಣೆ ಕೇಳಬೇಕು ಎಂದು ಒತ್ತಾಯಿಸಿದರು.

ಕೇಸ್ ಮ್ಯಾನೇಜ್ ಮಾಡುವುದರಲ್ಲಿ ನೀವು ಬಹಳ ಚಾಣಾಕ್ಷರು, ಮುಡಾ ಕೇಸ್‌ನಲ್ಲೇ ಅದನ್ನು ನಾವು ನೋಡಿದ್ದೇವೆ. ನಮಗೆ ಕೇಸ್ ಬಗ್ಗೆ ಹೇಳಿ ಕೊಡುವುದಕ್ಕೆ ಬರಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಮುಸ್ಲಿಮರು ಶಾಂತಿ ಪ್ರಿಯರು ಎಂದು ಸಿಎಂ ಸಿದ್ದರಾಮಯ್ಯನವರು ಮೊನ್ನೆ ಹೇಳಿದ್ದಾರೆ. ಆದರೆ ಮಂಡ್ಯದಲ್ಲಿ ಗಣೇಶ ಮೂರ್ತಿ ಮೇಲೆ ಕಲ್ಲು ಎಸೆದಿದ್ದು ಯಾರು ಸಿದ್ದರಾಮಯ್ಯನವರೇ? ಹಿಂದೂಗಳಷ್ಟು ಜಾತ್ಯತೀತರು ಮತ್ತೊಬ್ಬರು ಇಲ್ಲ. ಸಿಎಂ ಸಿದ್ದರಾಮಯ್ಯನವರೇ ಹಿಂದೂಗಳಿಗೆ ಜಾತ್ಯತೀತತೆ ಪಾಠ ಮಾಡಬೇಡಿ. ಸಿಎಂ ಮುಸ್ಲಿಮರಿಗೆ ಉತ್ತೇಜನ ಕೊಡುತ್ತಿದ್ದಾರೆ. ಮುಸ್ಲಿಮರು ಶಾಂತಿ ಪ್ರಿಯರು ಎಂದ ತಕ್ಷಣ ಮುಸ್ಲಿಮರು ಮಂಡ್ಯದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ಎಸೆದಿದ್ದಾರೆ. ಇದೇನಾ ಶಾಂತಿ ಪ್ರಿಯರು ಮಾಡುವ ಕೆಲಸ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಪ್ರವಾಸಿಗರ ಆಕರ್ಷಣೆಯ ಭದ್ರದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

24 mins ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

37 mins ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

4 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

4 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

4 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

4 hours ago