ಮೈಸೂರು ನಗರ

ಬಾನು ಮುಷ್ತಾಪ್‌ ಕ್ಷಮೆ ಕೇಳಿದಲ್ಲಿ ಕೇಸ್‌ ವಾಪಸ್‌ ಪಡೆಯುವೆ : ಪ್ರತಾಪ್‌ ಸಿಂಹ

ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರು ಮುಸ್ಲಿಂ ಎನ್ನುವ ಕಾರಣಕ್ಕಾಗಿ ಮೈಸೂರು ದಸರಾ ಉದ್ಘಾಟನೆಗೆ ವಿರೋಧ ಮಾಡುತ್ತಿಲ್ಲ. ಬದಲಾಗಿ ೨೦೨೩ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ ತಾಯಿಯ ಬಗ್ಗೆ ಆಡಿರುವ ಮಾತಿಗೆ ಕ್ಷಮೆ ಕೇಳಬೇಕು. ಕ್ಷಮೆ ಕೇಳಿದಲ್ಲಿ ನಾನು ಹಾಕಿರುವ ಕೇಸ್ ವಾಪಸ್ ಪಡೆಯುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ಹೈಕೋರ್ಟ್‌ನಲ್ಲಿ ಕಲಂ ೨೬ರ ಅಡಿ ಕೇಸ್ ಹಾಕಿದ್ದೇನೆ. ಇದರಲ್ಲಿ ಹಿಂದು ಧಾರ್ಮಿಕ ಪೂಜಾವಿಧಿ ವಿಧಾನಗಳ ಕುರಿತು ಹಾಗೂ ಸಂಪ್ರದಾಯಗಳ ವಿರುದ್ಧ ಕಂಡು ಬಂದರೆ ಪ್ರಶ್ನೆ ಮಾಡಬಹುದು ಎಂದು ಕಲಂ ೨೬ರಲ್ಲಿ ತಿಳಿಸಲಾಗಿದೆ. ಅದರಂತೆ ಕೇಸ್ ಹಾಕಿದ್ದೇನೆಯೇ ಹೊರತು ಇದರಲ್ಲಿ ಯಾವ ಬೇರೆ ಕಾರಣಗಳಿಲ್ಲ ಎಂದರು.

೨೦೨೩ರಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಆಡಿರುವ ಮಾತಿಗೆ ಕ್ಷಮೆ ಕೇಳಬೇಕು ಹಾಗೂ ದಸರಾ ಉದ್ಘಾಟನಾ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳ ಬಗ್ಗೆ ಸ್ಪಷ್ಟನೆ ಕೊಡಬೇಕು. ಹಾಗಾದರೆ ಮಾತ್ರ ನಾನು ಹಾಕಿರುವ ಕೇಸ್ ವಾಪಸ್ ಪಡೆಯುತ್ತೇನೆ ಎಂದು ಅವರು ಹೇಳಿದರು.

ಮುಸ್ಲಿಂ ಧರ್ಮದಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ. ಆದರೆ, ಹಿಂದು ಧಾರ್ಮಿಕ ಆಚರಣೆ ಬಗ್ಗೆ ಅವರ ಹಿಂದಿನ ಮಾತುಗಳು ಅವರಿಗಿರುವ ಭಾವನೆ ವ್ಯಕ್ತಪಡಿಸುತ್ತವೆ. ಹೀಗಾಗಿ ಅವರು ಸ್ಪಷ್ಟನೆ ನೀಡಬೇಕು ಎಂದು ಹೇಳಿದ ಪ್ರತಾಪ್ ಸಿಂಹ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಾವು ಜಾತ್ಯತೀತತೆಯ ಪಾಠ ಕಲಿಯಬೇಕಿಲ್ಲ. ಹಿಂದೂ ಧರ್ಮದ ಬಗ್ಗೆ ಈ ನೆಲದ ಕಾನೂನು ಹಾಗೂ ಸಂಸ್ಕೃತಿಯನ್ನು ಒಪ್ಪಿದವರಿಗೆ ನಾವು ಗೌರವ ಕೊಡುತ್ತೇವೆ ಎಂದರು.

ಏನೂ ಕೆಲಸವಿಲ್ಲದವರು ಇದನ್ನು ಮಾಡುತ್ತಾರೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ೨೦೨೩ರಲ್ಲಿ ಜನ ಸಾಹಿತ್ಯ ಸಮ್ಮೇಳನದಲ್ಲಿ ಬಾನು ಮುಷ್ತಾಕ್ ಮಾಡಿದ ಭಾಷಣ ನೀವು ಒಪ್ಪುತ್ತೀರಾ? ಈ ಬಗ್ಗೆ ತಮ್ಮ ಅಪ್ಪಣೆ ಕೇಳಬೇಕು ಎಂದು ಒತ್ತಾಯಿಸಿದರು.

ಕೇಸ್ ಮ್ಯಾನೇಜ್ ಮಾಡುವುದರಲ್ಲಿ ನೀವು ಬಹಳ ಚಾಣಾಕ್ಷರು, ಮುಡಾ ಕೇಸ್‌ನಲ್ಲೇ ಅದನ್ನು ನಾವು ನೋಡಿದ್ದೇವೆ. ನಮಗೆ ಕೇಸ್ ಬಗ್ಗೆ ಹೇಳಿ ಕೊಡುವುದಕ್ಕೆ ಬರಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಮುಸ್ಲಿಮರು ಶಾಂತಿ ಪ್ರಿಯರು ಎಂದು ಸಿಎಂ ಸಿದ್ದರಾಮಯ್ಯನವರು ಮೊನ್ನೆ ಹೇಳಿದ್ದಾರೆ. ಆದರೆ ಮಂಡ್ಯದಲ್ಲಿ ಗಣೇಶ ಮೂರ್ತಿ ಮೇಲೆ ಕಲ್ಲು ಎಸೆದಿದ್ದು ಯಾರು ಸಿದ್ದರಾಮಯ್ಯನವರೇ? ಹಿಂದೂಗಳಷ್ಟು ಜಾತ್ಯತೀತರು ಮತ್ತೊಬ್ಬರು ಇಲ್ಲ. ಸಿಎಂ ಸಿದ್ದರಾಮಯ್ಯನವರೇ ಹಿಂದೂಗಳಿಗೆ ಜಾತ್ಯತೀತತೆ ಪಾಠ ಮಾಡಬೇಡಿ. ಸಿಎಂ ಮುಸ್ಲಿಮರಿಗೆ ಉತ್ತೇಜನ ಕೊಡುತ್ತಿದ್ದಾರೆ. ಮುಸ್ಲಿಮರು ಶಾಂತಿ ಪ್ರಿಯರು ಎಂದ ತಕ್ಷಣ ಮುಸ್ಲಿಮರು ಮಂಡ್ಯದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ಎಸೆದಿದ್ದಾರೆ. ಇದೇನಾ ಶಾಂತಿ ಪ್ರಿಯರು ಮಾಡುವ ಕೆಲಸ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

10 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

10 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

11 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

11 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

12 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

12 hours ago