ಮೈಸೂರು ನಗರ

ಪ್ರೋತ್ಸಾಹ ಸಿಕ್ಕರೆ ಸಾಧನೆ ಮಾಡಲು ಸಾಧ್ಯ : ಕಲಾಶ್ರೀ ಕುಮಾರ್‌

ಮೈಸೂರು: ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕಾದಲ್ಲಿ ಗುರುಗಳ ಹಾಗೂ ಕುಟುಂಬಸ್ಥರ ಪ್ರೋತ್ಸಾಹ ಅತ್ಯಗತ್ಯ ಎಂದು ಕಲಾಶ್ರೀ ಡಾ.ಕೆ.ಕುಮಾರ್ ಹೇಳಿದರು.

ನಗರದ ರಾಮಾನುಜ ರಸ್ತೆಯಲ್ಲಿರುವ ಮೈಸೂರು ಆರ್ಟ್ ಗ್ಯಾಲರಿ ಆವರಣದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ತಿಂಗಳ ಸಾಧಕರಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ನಾನು ಕಿಂಚಿತ್ತು ಸಾಧನೆ ಮಾಡಿದ್ದೇನೆ ಎಂದರೆ, ಅದು ನನ್ನ ಗುರುಗಳು, ಶಿಕ್ಷಕರು, ಪತ್ನಿ ಹಾಗೂ ಅನೇಕರ ಪ್ರೀತಿ, ಹಾರೈಕೆ ಕಾರಣ ಎಂದರು.

ನಾನು ಭರತನಾಟ್ಯ ಕಲಿಯಲು ಮುಂದಾದಾಗ ನನ್ನ ಪೋಷಕರಿಗೆ ಅದು ಸಹ್ಯವಾಗಲಿಲ್ಲ. ಅವರಿಂದ ಸಾಕಷ್ಟು ವಿರೋಧ ಎದುರಿಸಬೇಕಾಯಿತು. ಈ ಅಸಹ್ಯವನ್ನು ಬಿಟ್ಟು ಬಿಡು ಎನುತ್ತಿದ್ದರು. ಸಂಬಂಧಗಳು ನನ್ನನ್ನು ಹಾಸ್ಯದೃಷ್ಟಿಯಲ್ಲಿ ನೋಡುತ್ತಿದ್ದರು ಎಂದು ಹೇಳಿದರು.

ಆದರೂ ಅವುಗಳೆಲ್ಲವನ್ನೂ ಮೆಟ್ಟಿನಿಂತ ನಾನು ನನ್ನ ಗುರುಗಳಾದ ನಂದಿನಿ ಹಾಗೂ ಸಂಗೀತಗಾರರಾಗಿದ್ದ ಶಿಕ್ಷಕ ಮಹದೇಪ್ಪ ಅವರ ಒತ್ತಾಸೆಯಿಂದ ಈ ಕ್ಷೇತ್ರದಲ್ಲಿ ಅಲ್ಪಮಟ್ಟಿಗಿನ ಸಾಧನೆ ಮಾಡುವಂತಾಯಿತು ಎಂದು ಹೇಳಿದರು.

ನಂತರ ನನ್ನನ್ನು ವಿವಾಹವಾದ ಮಾಲತಿ ಅವರು ವೈದ್ಯರಾಗಿದ್ದರೂ ಕೂಡ ನನ್ನಲ್ಲಿದ್ದ ಕಲೆಯನ್ನು ಪ್ರೋತ್ಸಾಹಿಸಿದರು. ನನ್ನ ಅಕ್ಕ, ಅಕ್ಕನ ಮಕ್ಕಳು, ನನ್ನ ಮಕ್ಕಳು ನನ್ನಲ್ಲಿದ್ದ ಕಲೆಯನ್ನು ಪ್ರೋತ್ಸಾಹಿಸಿ ನನ್ನ ಬೆಳವಣಿಗೆಗೆ ಕಾರಣರಾದರು ಎಂದರು.

ಆರ್ಟ್ ಗ್ಯಾಲರಿ ಸಂಸ್ಥಾಪಕ ಅಧ್ಯಕ್ಷ ಎಲ್.ಶಿವಲಿಂಗಪ್ಪ ಮಾತನಾಡಿ, ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಗೀತ ಹಾಗೂ ನೃತ್ಯ ಕ್ಷೇತ್ರದಲ್ಲಿ ೨೦ಕ್ಕೂ ಹೆಚ್ಚು ಮಂದಿ ಪಿಎಚ್.ಡಿ ಪಡೆದಿದ್ದಾರೆ. ತಮ್ಮ ಮನೆಯ ಒಂದು ಭಾಗವನ್ನು ಕಲೆಮನೆ ಹೆಸರಿನಲ್ಲಿ ಕಲಾ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಕೆ.ಜೆ.ನಾರಾಯಣ ಕಿಕ್ಕೇರಿ, ಸಂಸ್ಥೆಯ ಕಾರ್ಯದರ್ಶಿ ಡಾ.ಜಮುನಾ ರಾಣಿ ಮಿರ್ಲೆ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಎಂ.ಚಂದ್ರಶೇಖರ್, ಮಾಲತಿ ಕುಮಾರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

6 mins ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

10 mins ago

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

7 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

10 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

10 hours ago