ಮೈಸೂರು ನಗರ

ಪ್ರೋತ್ಸಾಹ ಸಿಕ್ಕರೆ ಸಾಧನೆ ಮಾಡಲು ಸಾಧ್ಯ : ಕಲಾಶ್ರೀ ಕುಮಾರ್‌

ಮೈಸೂರು: ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕಾದಲ್ಲಿ ಗುರುಗಳ ಹಾಗೂ ಕುಟುಂಬಸ್ಥರ ಪ್ರೋತ್ಸಾಹ ಅತ್ಯಗತ್ಯ ಎಂದು ಕಲಾಶ್ರೀ ಡಾ.ಕೆ.ಕುಮಾರ್ ಹೇಳಿದರು.

ನಗರದ ರಾಮಾನುಜ ರಸ್ತೆಯಲ್ಲಿರುವ ಮೈಸೂರು ಆರ್ಟ್ ಗ್ಯಾಲರಿ ಆವರಣದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ತಿಂಗಳ ಸಾಧಕರಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ನಾನು ಕಿಂಚಿತ್ತು ಸಾಧನೆ ಮಾಡಿದ್ದೇನೆ ಎಂದರೆ, ಅದು ನನ್ನ ಗುರುಗಳು, ಶಿಕ್ಷಕರು, ಪತ್ನಿ ಹಾಗೂ ಅನೇಕರ ಪ್ರೀತಿ, ಹಾರೈಕೆ ಕಾರಣ ಎಂದರು.

ನಾನು ಭರತನಾಟ್ಯ ಕಲಿಯಲು ಮುಂದಾದಾಗ ನನ್ನ ಪೋಷಕರಿಗೆ ಅದು ಸಹ್ಯವಾಗಲಿಲ್ಲ. ಅವರಿಂದ ಸಾಕಷ್ಟು ವಿರೋಧ ಎದುರಿಸಬೇಕಾಯಿತು. ಈ ಅಸಹ್ಯವನ್ನು ಬಿಟ್ಟು ಬಿಡು ಎನುತ್ತಿದ್ದರು. ಸಂಬಂಧಗಳು ನನ್ನನ್ನು ಹಾಸ್ಯದೃಷ್ಟಿಯಲ್ಲಿ ನೋಡುತ್ತಿದ್ದರು ಎಂದು ಹೇಳಿದರು.

ಆದರೂ ಅವುಗಳೆಲ್ಲವನ್ನೂ ಮೆಟ್ಟಿನಿಂತ ನಾನು ನನ್ನ ಗುರುಗಳಾದ ನಂದಿನಿ ಹಾಗೂ ಸಂಗೀತಗಾರರಾಗಿದ್ದ ಶಿಕ್ಷಕ ಮಹದೇಪ್ಪ ಅವರ ಒತ್ತಾಸೆಯಿಂದ ಈ ಕ್ಷೇತ್ರದಲ್ಲಿ ಅಲ್ಪಮಟ್ಟಿಗಿನ ಸಾಧನೆ ಮಾಡುವಂತಾಯಿತು ಎಂದು ಹೇಳಿದರು.

ನಂತರ ನನ್ನನ್ನು ವಿವಾಹವಾದ ಮಾಲತಿ ಅವರು ವೈದ್ಯರಾಗಿದ್ದರೂ ಕೂಡ ನನ್ನಲ್ಲಿದ್ದ ಕಲೆಯನ್ನು ಪ್ರೋತ್ಸಾಹಿಸಿದರು. ನನ್ನ ಅಕ್ಕ, ಅಕ್ಕನ ಮಕ್ಕಳು, ನನ್ನ ಮಕ್ಕಳು ನನ್ನಲ್ಲಿದ್ದ ಕಲೆಯನ್ನು ಪ್ರೋತ್ಸಾಹಿಸಿ ನನ್ನ ಬೆಳವಣಿಗೆಗೆ ಕಾರಣರಾದರು ಎಂದರು.

ಆರ್ಟ್ ಗ್ಯಾಲರಿ ಸಂಸ್ಥಾಪಕ ಅಧ್ಯಕ್ಷ ಎಲ್.ಶಿವಲಿಂಗಪ್ಪ ಮಾತನಾಡಿ, ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಗೀತ ಹಾಗೂ ನೃತ್ಯ ಕ್ಷೇತ್ರದಲ್ಲಿ ೨೦ಕ್ಕೂ ಹೆಚ್ಚು ಮಂದಿ ಪಿಎಚ್.ಡಿ ಪಡೆದಿದ್ದಾರೆ. ತಮ್ಮ ಮನೆಯ ಒಂದು ಭಾಗವನ್ನು ಕಲೆಮನೆ ಹೆಸರಿನಲ್ಲಿ ಕಲಾ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಕೆ.ಜೆ.ನಾರಾಯಣ ಕಿಕ್ಕೇರಿ, ಸಂಸ್ಥೆಯ ಕಾರ್ಯದರ್ಶಿ ಡಾ.ಜಮುನಾ ರಾಣಿ ಮಿರ್ಲೆ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಎಂ.ಚಂದ್ರಶೇಖರ್, ಮಾಲತಿ ಕುಮಾರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

9 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

10 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

10 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

12 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

12 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago