ಮೈಸೂರು ನಗರ

ಪ್ರಧಾನಿ ಮೋದಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ಮಾಡಲಿ: ಸಚಿವ ಸಂತೋಷ್‌ ಲಾಡ್‌

ಮೈಸೂರು: ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ಮಾಡಿದ್ದು, ಈ ಬಗ್ಗೆ ದೇಶದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲಿ ಹೆಚ್ಚು ಮತಗಳ್ಳತನ ಆಗಿದೆ. ಅದು ಯಾವ ಜಿಲ್ಲೆಯಲ್ಲಿ ಎಂಬುದರ ಬಗ್ಗೆ ನನಗೆ ಅಷ್ಟು ಮಾಹಿತಿ ಇಲ್ಲ. ಪಾರ್ಲಿಮೆಂಟ್ ಚುನಾವಣೆ ಆದಮೇಲೆ ಮಹಾರಾಷ್ಟ್ರದಲ್ಲಿ 41 ಲಕ್ಷ ವೋಟ್ ಜಾಸ್ತಿಯಾಗಿದೆ. ಬಿಹಾರದಲ್ಲಿ 61 ಲಕ್ಷ ವೋಟ್ ಕಡಿಮೆ ಆಗಿದೆ ಇದರರ್ಥ ಏನು? ಎಂದು ಪ್ರಶ್ನೆ ಮಾಡಿದರು. ಮತಗಳ್ಳತನ ಆಗಿದೆ ಎಂದು ನನಗೆ ಅನ್ನಿಸುತ್ತಿದೆ. 4% ವೋಟ್ ಕಡಿಮೆ ಜಾಸ್ತಿ ಆದ್ರೆ, ಇದಕ್ಕೆ ಚುನಾವಣಾ ಆಯೋಗ ಕಾರಣ ಕೊಡಬೇಕು. ಇದನ್ನು ಮುಚ್ಚಿ ಹಾಕಿಕೊಂಡು, ತಳ್ಳಿಹಾಕಿಕೊಂಡು ಹೋದರೆ ಏನರ್ಥ?. ಇದು ಎಲ್ಲರ ಮೂಲಭೂತ ಹಕ್ಕು. ಚುನಾವಣೆ ಗೆಲ್ಲೋದು ಪ್ರಚಾರ ಮಾಡೋದು ಅಷ್ಟೇನಾ ಕೇಂದ್ರ ಸರ್ಕಾರದ ಕೆಲಸ? ಬಿಹಾರದಲ್ಲಿ 70 ಸಾವಿರ ಕೋಟಿ ಮಿಸ್ಸಿಂಗ್ ಆಗಿದೆ ಎಂದು ವರದಿಯಾಗಿದೆ. ಇದರ ಬಗ್ಗೆ ಚರ್ಚೆ ಮಾಡೋದು ಬೇಡ್ವಾ? ಕಳೆದ 10 ವರ್ಷದಲ್ಲಿ ಬಿಹಾರದಲ್ಲಿ 150 ಬ್ರಿಡ್ಜ್ ಬಿದ್ದಿದೆ.
ಪ್ರಧಾನಿ ಇದನ್ನು ಬಿಟ್ಟು ಪಾಕಿಸ್ತಾನ, ಮುಸ್ಲಿಂ ಅಂತಾ ವೋಟ್ ಕೇಳ್ತಾರೆ. ಮೋಸ ಮಾಡಿ ಬಿಜೆಪಿಗೆ ಇಷ್ಟು ವೋಟ್ ಬಿದ್ದಿವೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಯುಪಿಎ ಸರ್ಕಾರ ಇದ್ದಾಗ ಅಕ್ರಮ 80 ಲಕ್ಷ ಬಾಂಗ್ಲಾದೇಶ ವಲಸಿಗರನ್ನು ವಾಪಸ್ ಕಳುಹಿಸಿದ್ದೇವೆ. ಬಿಜೆಪಿ ಸರ್ಕಾರ ಎಷ್ಟು ಜನರನ್ನು ಕಳುಹಿಸಿದೆ. ಬರೀ ಸುಳ್ಳು ಹೇಳೋದು,
ಪ್ರಚಾರ ಪಡಿಯೋದು. ಟಿವಿ ಟಿವಿ ಟಿವಿ ಇದೇ ಮೋದಿ ಮಾಡಿರೋದು. ಇವರ ಭಾಷಣವನ್ನು ಮಾತ್ರ ಜನ ಕೇಳ್ಬೇಕು. ಆದರೆ ಇವರಿಗೆ ಯಾರು ಪ್ರಶ್ನೆ ಕೇಳಬಾರದು. ಇದು ಬಿಜೆಪಿ ಮನಸ್ಥಿತಿ. ಮೋದಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ಮಾಡಲಿ. ದೇಶದ ಸಾಲ ಜಾಸ್ತಿಯಾಗಿದೆ. ಡೀಸೆಲ್ ಪೆಟ್ರೋಲ್ ಬೆಲೆ ಜಾಸ್ತಿಯಾಗಿದೆ. ಅದರ ಬಗ್ಗೆ ಬಿಜೆಪಿ ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ರಾಹುಲ್ ಗಾಂಧಿ ವಿರುದ್ಧ ಏನು ಪ್ರತಿಭಟನೆ ಮಾಡುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…

6 mins ago

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…

17 mins ago

ಪಾಕಿಸ್ತಾನ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: ಐವರು ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…

30 mins ago

ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣ: ರಾಜೀವ್‌ಗೌಡ ಮನೆಗಳಿಗೆ ನೋಟಿಸ್‌ ಅಂಟಿಸಿದ ಪೊಲೀಸರು

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪತ್ತೆಗಾಗಿ ಪೊಲೀಸರು…

1 hour ago

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

4 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

4 hours ago