ಮೈಸೂರು ನಗರ

ಪ್ರಧಾನಿ ಮೋದಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ಮಾಡಲಿ: ಸಚಿವ ಸಂತೋಷ್‌ ಲಾಡ್‌

ಮೈಸೂರು: ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ಮಾಡಿದ್ದು, ಈ ಬಗ್ಗೆ ದೇಶದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲಿ ಹೆಚ್ಚು ಮತಗಳ್ಳತನ ಆಗಿದೆ. ಅದು ಯಾವ ಜಿಲ್ಲೆಯಲ್ಲಿ ಎಂಬುದರ ಬಗ್ಗೆ ನನಗೆ ಅಷ್ಟು ಮಾಹಿತಿ ಇಲ್ಲ. ಪಾರ್ಲಿಮೆಂಟ್ ಚುನಾವಣೆ ಆದಮೇಲೆ ಮಹಾರಾಷ್ಟ್ರದಲ್ಲಿ 41 ಲಕ್ಷ ವೋಟ್ ಜಾಸ್ತಿಯಾಗಿದೆ. ಬಿಹಾರದಲ್ಲಿ 61 ಲಕ್ಷ ವೋಟ್ ಕಡಿಮೆ ಆಗಿದೆ ಇದರರ್ಥ ಏನು? ಎಂದು ಪ್ರಶ್ನೆ ಮಾಡಿದರು. ಮತಗಳ್ಳತನ ಆಗಿದೆ ಎಂದು ನನಗೆ ಅನ್ನಿಸುತ್ತಿದೆ. 4% ವೋಟ್ ಕಡಿಮೆ ಜಾಸ್ತಿ ಆದ್ರೆ, ಇದಕ್ಕೆ ಚುನಾವಣಾ ಆಯೋಗ ಕಾರಣ ಕೊಡಬೇಕು. ಇದನ್ನು ಮುಚ್ಚಿ ಹಾಕಿಕೊಂಡು, ತಳ್ಳಿಹಾಕಿಕೊಂಡು ಹೋದರೆ ಏನರ್ಥ?. ಇದು ಎಲ್ಲರ ಮೂಲಭೂತ ಹಕ್ಕು. ಚುನಾವಣೆ ಗೆಲ್ಲೋದು ಪ್ರಚಾರ ಮಾಡೋದು ಅಷ್ಟೇನಾ ಕೇಂದ್ರ ಸರ್ಕಾರದ ಕೆಲಸ? ಬಿಹಾರದಲ್ಲಿ 70 ಸಾವಿರ ಕೋಟಿ ಮಿಸ್ಸಿಂಗ್ ಆಗಿದೆ ಎಂದು ವರದಿಯಾಗಿದೆ. ಇದರ ಬಗ್ಗೆ ಚರ್ಚೆ ಮಾಡೋದು ಬೇಡ್ವಾ? ಕಳೆದ 10 ವರ್ಷದಲ್ಲಿ ಬಿಹಾರದಲ್ಲಿ 150 ಬ್ರಿಡ್ಜ್ ಬಿದ್ದಿದೆ.
ಪ್ರಧಾನಿ ಇದನ್ನು ಬಿಟ್ಟು ಪಾಕಿಸ್ತಾನ, ಮುಸ್ಲಿಂ ಅಂತಾ ವೋಟ್ ಕೇಳ್ತಾರೆ. ಮೋಸ ಮಾಡಿ ಬಿಜೆಪಿಗೆ ಇಷ್ಟು ವೋಟ್ ಬಿದ್ದಿವೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಯುಪಿಎ ಸರ್ಕಾರ ಇದ್ದಾಗ ಅಕ್ರಮ 80 ಲಕ್ಷ ಬಾಂಗ್ಲಾದೇಶ ವಲಸಿಗರನ್ನು ವಾಪಸ್ ಕಳುಹಿಸಿದ್ದೇವೆ. ಬಿಜೆಪಿ ಸರ್ಕಾರ ಎಷ್ಟು ಜನರನ್ನು ಕಳುಹಿಸಿದೆ. ಬರೀ ಸುಳ್ಳು ಹೇಳೋದು,
ಪ್ರಚಾರ ಪಡಿಯೋದು. ಟಿವಿ ಟಿವಿ ಟಿವಿ ಇದೇ ಮೋದಿ ಮಾಡಿರೋದು. ಇವರ ಭಾಷಣವನ್ನು ಮಾತ್ರ ಜನ ಕೇಳ್ಬೇಕು. ಆದರೆ ಇವರಿಗೆ ಯಾರು ಪ್ರಶ್ನೆ ಕೇಳಬಾರದು. ಇದು ಬಿಜೆಪಿ ಮನಸ್ಥಿತಿ. ಮೋದಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ಮಾಡಲಿ. ದೇಶದ ಸಾಲ ಜಾಸ್ತಿಯಾಗಿದೆ. ಡೀಸೆಲ್ ಪೆಟ್ರೋಲ್ ಬೆಲೆ ಜಾಸ್ತಿಯಾಗಿದೆ. ಅದರ ಬಗ್ಗೆ ಬಿಜೆಪಿ ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ರಾಹುಲ್ ಗಾಂಧಿ ವಿರುದ್ಧ ಏನು ಪ್ರತಿಭಟನೆ ಮಾಡುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

8 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

10 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

11 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

11 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

12 hours ago