ಮೈಸೂರು ನಗರ

ಪ್ರಧಾನಿ ಮೋದಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ಮಾಡಲಿ: ಸಚಿವ ಸಂತೋಷ್‌ ಲಾಡ್‌

ಮೈಸೂರು: ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ಮಾಡಿದ್ದು, ಈ ಬಗ್ಗೆ ದೇಶದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲಿ ಹೆಚ್ಚು ಮತಗಳ್ಳತನ ಆಗಿದೆ. ಅದು ಯಾವ ಜಿಲ್ಲೆಯಲ್ಲಿ ಎಂಬುದರ ಬಗ್ಗೆ ನನಗೆ ಅಷ್ಟು ಮಾಹಿತಿ ಇಲ್ಲ. ಪಾರ್ಲಿಮೆಂಟ್ ಚುನಾವಣೆ ಆದಮೇಲೆ ಮಹಾರಾಷ್ಟ್ರದಲ್ಲಿ 41 ಲಕ್ಷ ವೋಟ್ ಜಾಸ್ತಿಯಾಗಿದೆ. ಬಿಹಾರದಲ್ಲಿ 61 ಲಕ್ಷ ವೋಟ್ ಕಡಿಮೆ ಆಗಿದೆ ಇದರರ್ಥ ಏನು? ಎಂದು ಪ್ರಶ್ನೆ ಮಾಡಿದರು. ಮತಗಳ್ಳತನ ಆಗಿದೆ ಎಂದು ನನಗೆ ಅನ್ನಿಸುತ್ತಿದೆ. 4% ವೋಟ್ ಕಡಿಮೆ ಜಾಸ್ತಿ ಆದ್ರೆ, ಇದಕ್ಕೆ ಚುನಾವಣಾ ಆಯೋಗ ಕಾರಣ ಕೊಡಬೇಕು. ಇದನ್ನು ಮುಚ್ಚಿ ಹಾಕಿಕೊಂಡು, ತಳ್ಳಿಹಾಕಿಕೊಂಡು ಹೋದರೆ ಏನರ್ಥ?. ಇದು ಎಲ್ಲರ ಮೂಲಭೂತ ಹಕ್ಕು. ಚುನಾವಣೆ ಗೆಲ್ಲೋದು ಪ್ರಚಾರ ಮಾಡೋದು ಅಷ್ಟೇನಾ ಕೇಂದ್ರ ಸರ್ಕಾರದ ಕೆಲಸ? ಬಿಹಾರದಲ್ಲಿ 70 ಸಾವಿರ ಕೋಟಿ ಮಿಸ್ಸಿಂಗ್ ಆಗಿದೆ ಎಂದು ವರದಿಯಾಗಿದೆ. ಇದರ ಬಗ್ಗೆ ಚರ್ಚೆ ಮಾಡೋದು ಬೇಡ್ವಾ? ಕಳೆದ 10 ವರ್ಷದಲ್ಲಿ ಬಿಹಾರದಲ್ಲಿ 150 ಬ್ರಿಡ್ಜ್ ಬಿದ್ದಿದೆ.
ಪ್ರಧಾನಿ ಇದನ್ನು ಬಿಟ್ಟು ಪಾಕಿಸ್ತಾನ, ಮುಸ್ಲಿಂ ಅಂತಾ ವೋಟ್ ಕೇಳ್ತಾರೆ. ಮೋಸ ಮಾಡಿ ಬಿಜೆಪಿಗೆ ಇಷ್ಟು ವೋಟ್ ಬಿದ್ದಿವೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಯುಪಿಎ ಸರ್ಕಾರ ಇದ್ದಾಗ ಅಕ್ರಮ 80 ಲಕ್ಷ ಬಾಂಗ್ಲಾದೇಶ ವಲಸಿಗರನ್ನು ವಾಪಸ್ ಕಳುಹಿಸಿದ್ದೇವೆ. ಬಿಜೆಪಿ ಸರ್ಕಾರ ಎಷ್ಟು ಜನರನ್ನು ಕಳುಹಿಸಿದೆ. ಬರೀ ಸುಳ್ಳು ಹೇಳೋದು,
ಪ್ರಚಾರ ಪಡಿಯೋದು. ಟಿವಿ ಟಿವಿ ಟಿವಿ ಇದೇ ಮೋದಿ ಮಾಡಿರೋದು. ಇವರ ಭಾಷಣವನ್ನು ಮಾತ್ರ ಜನ ಕೇಳ್ಬೇಕು. ಆದರೆ ಇವರಿಗೆ ಯಾರು ಪ್ರಶ್ನೆ ಕೇಳಬಾರದು. ಇದು ಬಿಜೆಪಿ ಮನಸ್ಥಿತಿ. ಮೋದಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ಮಾಡಲಿ. ದೇಶದ ಸಾಲ ಜಾಸ್ತಿಯಾಗಿದೆ. ಡೀಸೆಲ್ ಪೆಟ್ರೋಲ್ ಬೆಲೆ ಜಾಸ್ತಿಯಾಗಿದೆ. ಅದರ ಬಗ್ಗೆ ಬಿಜೆಪಿ ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ರಾಹುಲ್ ಗಾಂಧಿ ವಿರುದ್ಧ ಏನು ಪ್ರತಿಭಟನೆ ಮಾಡುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago