ಮೈಸೂರು ನಗರ

ಪ್ರಧಾನಿ ಮೋದಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ಮಾಡಲಿ: ಸಚಿವ ಸಂತೋಷ್‌ ಲಾಡ್‌

ಮೈಸೂರು: ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ಮಾಡಿದ್ದು, ಈ ಬಗ್ಗೆ ದೇಶದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲಿ ಹೆಚ್ಚು ಮತಗಳ್ಳತನ ಆಗಿದೆ. ಅದು ಯಾವ ಜಿಲ್ಲೆಯಲ್ಲಿ ಎಂಬುದರ ಬಗ್ಗೆ ನನಗೆ ಅಷ್ಟು ಮಾಹಿತಿ ಇಲ್ಲ. ಪಾರ್ಲಿಮೆಂಟ್ ಚುನಾವಣೆ ಆದಮೇಲೆ ಮಹಾರಾಷ್ಟ್ರದಲ್ಲಿ 41 ಲಕ್ಷ ವೋಟ್ ಜಾಸ್ತಿಯಾಗಿದೆ. ಬಿಹಾರದಲ್ಲಿ 61 ಲಕ್ಷ ವೋಟ್ ಕಡಿಮೆ ಆಗಿದೆ ಇದರರ್ಥ ಏನು? ಎಂದು ಪ್ರಶ್ನೆ ಮಾಡಿದರು. ಮತಗಳ್ಳತನ ಆಗಿದೆ ಎಂದು ನನಗೆ ಅನ್ನಿಸುತ್ತಿದೆ. 4% ವೋಟ್ ಕಡಿಮೆ ಜಾಸ್ತಿ ಆದ್ರೆ, ಇದಕ್ಕೆ ಚುನಾವಣಾ ಆಯೋಗ ಕಾರಣ ಕೊಡಬೇಕು. ಇದನ್ನು ಮುಚ್ಚಿ ಹಾಕಿಕೊಂಡು, ತಳ್ಳಿಹಾಕಿಕೊಂಡು ಹೋದರೆ ಏನರ್ಥ?. ಇದು ಎಲ್ಲರ ಮೂಲಭೂತ ಹಕ್ಕು. ಚುನಾವಣೆ ಗೆಲ್ಲೋದು ಪ್ರಚಾರ ಮಾಡೋದು ಅಷ್ಟೇನಾ ಕೇಂದ್ರ ಸರ್ಕಾರದ ಕೆಲಸ? ಬಿಹಾರದಲ್ಲಿ 70 ಸಾವಿರ ಕೋಟಿ ಮಿಸ್ಸಿಂಗ್ ಆಗಿದೆ ಎಂದು ವರದಿಯಾಗಿದೆ. ಇದರ ಬಗ್ಗೆ ಚರ್ಚೆ ಮಾಡೋದು ಬೇಡ್ವಾ? ಕಳೆದ 10 ವರ್ಷದಲ್ಲಿ ಬಿಹಾರದಲ್ಲಿ 150 ಬ್ರಿಡ್ಜ್ ಬಿದ್ದಿದೆ.
ಪ್ರಧಾನಿ ಇದನ್ನು ಬಿಟ್ಟು ಪಾಕಿಸ್ತಾನ, ಮುಸ್ಲಿಂ ಅಂತಾ ವೋಟ್ ಕೇಳ್ತಾರೆ. ಮೋಸ ಮಾಡಿ ಬಿಜೆಪಿಗೆ ಇಷ್ಟು ವೋಟ್ ಬಿದ್ದಿವೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಯುಪಿಎ ಸರ್ಕಾರ ಇದ್ದಾಗ ಅಕ್ರಮ 80 ಲಕ್ಷ ಬಾಂಗ್ಲಾದೇಶ ವಲಸಿಗರನ್ನು ವಾಪಸ್ ಕಳುಹಿಸಿದ್ದೇವೆ. ಬಿಜೆಪಿ ಸರ್ಕಾರ ಎಷ್ಟು ಜನರನ್ನು ಕಳುಹಿಸಿದೆ. ಬರೀ ಸುಳ್ಳು ಹೇಳೋದು,
ಪ್ರಚಾರ ಪಡಿಯೋದು. ಟಿವಿ ಟಿವಿ ಟಿವಿ ಇದೇ ಮೋದಿ ಮಾಡಿರೋದು. ಇವರ ಭಾಷಣವನ್ನು ಮಾತ್ರ ಜನ ಕೇಳ್ಬೇಕು. ಆದರೆ ಇವರಿಗೆ ಯಾರು ಪ್ರಶ್ನೆ ಕೇಳಬಾರದು. ಇದು ಬಿಜೆಪಿ ಮನಸ್ಥಿತಿ. ಮೋದಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ಮಾಡಲಿ. ದೇಶದ ಸಾಲ ಜಾಸ್ತಿಯಾಗಿದೆ. ಡೀಸೆಲ್ ಪೆಟ್ರೋಲ್ ಬೆಲೆ ಜಾಸ್ತಿಯಾಗಿದೆ. ಅದರ ಬಗ್ಗೆ ಬಿಜೆಪಿ ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ರಾಹುಲ್ ಗಾಂಧಿ ವಿರುದ್ಧ ಏನು ಪ್ರತಿಭಟನೆ ಮಾಡುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

10 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

12 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

15 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

17 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

18 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

19 hours ago