ಮೈಸೂರು: ಇನ್ನು ಮೂರ್ನಾಲ್ಕು ದಿನಗಳಲ್ಲಿ ರಸಗೊಬ್ಬರದ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರಗಳ ವಿರುದ್ಧ ಹೋರಾಟ ನಡೆಸಲಾಗುತ್ತದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ ರೈತರ ಸಮಸ್ಯೆ ಉಲ್ಬಣ ಆಗುತ್ತಿದೆ. ರೈತರಿಗೆ ಸಮರ್ಪಕವಾಗಿ ಗೊಬ್ಬರ ವಿತರಣೆ ಮಾಡುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡು ವಿತರಣೆ ಮಾಡುತ್ತಿಲ್ಲ. ನಮ್ಮ ರಾಜ್ಯದಲ್ಲಿ ರಸಗೊಬ್ಬರ ಯೂರಿಯಾ ಕೊರತೆ ಇದೆ. ಕೇಂದ್ರದ ಮೇಲೆ ರಾಜ್ಯ, ರಾಜ್ಯದ ಮೇಲೆ ಕೇಂದ್ರ ಆರೋಪ ಮಾಡುತ್ತಿವೆ. ಕಾಳ ಸಂತೆಯಲ್ಲಿ ಮಾತ್ರ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ತಕ್ಷಣ ರಸಗೊಬ್ಬರ ಕೊರತೆಯನ್ನು ಸರಿಮಾಡಬೇಕು. ಇವು ನರಸತ್ತ ಸರ್ಕಾರಗಳು. ಮೂರ್ನಾಲ್ಕು ದಿನಗಳ ಕಾಲ ಕಾದು ನೋಡುತ್ತೇವೆ. ಒಂದು ಸರ್ಕಾರ ಈ ಸಮಸ್ಯೆ ಬಗೆಹರಿಸದೆ ಇದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.
ಇನ್ನು ಪ್ರಾಣಿ ಮತ್ತು ಮಾನವ ಸಂಘರ್ಷ ನಡೆಯುತ್ತಲೇ ಇದೆ. ಅರಣ್ಯ ಸಚಿವರು ಕೇವಲ ದಸರಾ ಆನೆ ಸ್ವಾಗತ ಮಾಡಿ ಹೋಗೋದಲ್ಲ. ಆನೆಗಳಿಂದ ಆಗುವ ತೊಂದರೆ ಬಗ್ಗೆ ಗಮನಹರಿಸಬೇಕು. ಮೈಸೂರು ಭಾಗದಲ್ಲಿ ಒಂದು ದಿನ ಸಚಿವರು ವಾಸ್ತವ್ಯ ಹೂಡಿ, ಇಲ್ಲಿನ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…