ಮೈಸೂರು ನಗರ

ರಾಜ್ಯದಲ್ಲಿ ಗೊಬ್ಬರದ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ: ಬಡಗಲಪುರ ನಾಗೇಂದ್ರ ಎಚ್ಚರಿಕೆ

ಮೈಸೂರು: ಇನ್ನು ಮೂರ್ನಾಲ್ಕು ದಿನಗಳಲ್ಲಿ ರಸಗೊಬ್ಬರದ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರಗಳ ವಿರುದ್ಧ ಹೋರಾಟ ನಡೆಸಲಾಗುತ್ತದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ ರೈತರ ಸಮಸ್ಯೆ ಉಲ್ಬಣ ಆಗುತ್ತಿದೆ. ರೈತರಿಗೆ ಸಮರ್ಪಕವಾಗಿ ಗೊಬ್ಬರ ವಿತರಣೆ ಮಾಡುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡು ವಿತರಣೆ ಮಾಡುತ್ತಿಲ್ಲ. ನಮ್ಮ ರಾಜ್ಯದಲ್ಲಿ ರಸಗೊಬ್ಬರ ಯೂರಿಯಾ ಕೊರತೆ ಇದೆ. ಕೇಂದ್ರದ ಮೇಲೆ ರಾಜ್ಯ, ರಾಜ್ಯದ ಮೇಲೆ ಕೇಂದ್ರ ಆರೋಪ ಮಾಡುತ್ತಿವೆ. ಕಾಳ ಸಂತೆಯಲ್ಲಿ ಮಾತ್ರ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ತಕ್ಷಣ ರಸಗೊಬ್ಬರ ಕೊರತೆಯನ್ನು ಸರಿಮಾಡಬೇಕು. ಇವು ನರಸತ್ತ ಸರ್ಕಾರಗಳು. ಮೂರ್ನಾಲ್ಕು ದಿನಗಳ ಕಾಲ ಕಾದು ನೋಡುತ್ತೇವೆ. ಒಂದು ಸರ್ಕಾರ ಈ ಸಮಸ್ಯೆ ಬಗೆಹರಿಸದೆ ಇದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಇನ್ನು ಪ್ರಾಣಿ ಮತ್ತು ಮಾನವ ಸಂಘರ್ಷ ನಡೆಯುತ್ತಲೇ ಇದೆ. ಅರಣ್ಯ ಸಚಿವರು ಕೇವಲ ದಸರಾ ಆನೆ ಸ್ವಾಗತ ಮಾಡಿ ಹೋಗೋದಲ್ಲ. ಆನೆಗಳಿಂದ ಆಗುವ ತೊಂದರೆ ಬಗ್ಗೆ ಗಮನಹರಿಸಬೇಕು. ಮೈಸೂರು ಭಾಗದಲ್ಲಿ ಒಂದು ದಿನ ಸಚಿವರು ವಾಸ್ತವ್ಯ ಹೂಡಿ, ಇಲ್ಲಿನ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

10 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

10 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

11 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

11 hours ago