ಮೈಸೂರು: ಶಾಲಾ- ಕಾಲೇಜಿನ ಸುತ್ತ-ಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅಂತಹ ವ್ಯಕ್ತಿ ಅಥವಾ ಅಂಗಡಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಎಚ್ಚರಿಕೆ ನೀಡಿದರು.
ಇಂದು(ಆ.23) ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ “ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನ ಸಭೆ”ಯಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜಿನ ಮಕ್ಕಳು ತಂಬಾಕು ಸೇವನೆಗೆ ಒಳಗಾಗುತ್ತಿದ್ದಾರೆ. ಶಾಲಾ ಕಾಲೇಜುಗಳ ಸುತ್ತ – ಮುತ್ತ ಇರುವ ಪೆಟ್ಟಿ ಅಂಗಡಿಗಳು ಹಾಗೂ ವ್ಯಕ್ತಿಗಳು ಯಾರಿಗೂ ತಿಳಿಯದಂತೆ ತಂಬಾಕುಗಳನ್ನು ಮಕ್ಕಳಿಗೆ ಮಾರಾಟ ಮಾಡಿ, ಮಕ್ಕಳನ್ನು ವ್ಯಸನಿಗಳನ್ನಾಗಿ ಮಾಡುತ್ತಿದ್ದಾರೆ. ಅಂತಹವರನ್ನು ಗುರುತಿಸಿ ಕಠಿಣ ಶಿಕ್ಷೆ ಹಾಗೂ ದಂಡವನ್ನು ವಿಧಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ ಅಧಿಕಾರಿಗಳು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ತಂಬಾಕು ಸೇವನೆಯ ಸಂಬಂಧ ಕಾರ್ಯಕ್ರಮಗಳನ್ನು ರೂಪಿಸಿ ಮಕ್ಕಳಿಗೆ ಅವುಗಳ ಮೂಲಕ ಜಾಗೃತಿ ಮೂಡಿಸಬೇಕು. ಇದನ್ನು ಅಧಿಕಾರಿಗಳು ನಿರ್ಲಕ್ಷಿಸದರೆ ಮುಂದೆ ನಮ್ಮ ಮಕ್ಕಳೇ ಚಟಕ್ಕೆ ಬಲಿಯಾಗುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಇಂದಿನಿಂದಲೇ ನಿಯಮ ಬಾಹಿರ ತಂಬಾಕು ಮಾರಾಟ ಹಾಗೂ ಸೇವನೆಯನ್ನು ತಡೆಗಟ್ಟಲು ಮುಂದಾಗಬೇಕು ಎಂದು ಹೇಳಿದರು.
ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವಂತಹ ಅಂಗಡಿಯ ಪರವಾನಗಿಯನ್ನು ರದ್ದು ಮಾಡಿ, ಅಂಗಡಿ ಮಾಲೀಕನಿಗೆ ದಂಡವನ್ನು ವಿಧಿಸಬೇಕು. ಸಾರ್ವಜನಿಕವಾಗಿ ತಂಬಾಕು ಸೇವನೆ ಮಾಡುವವರಿಗೆ ದಂಡ ಹಾಕಬೇಕು ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಪ್ರಸ್ತುತ ಜಿಲ್ಲೆಯ ತಂಬಾಕು ಸೇವನೆಯ ಪ್ರಮಾಣದಲ್ಲಿ ನಾವು ನಿಯಂತ್ರಣದ ಹಂತದಲ್ಲಿದ್ದು, ಮುಂದೆ ನಿರ್ಮೂಲನೆಯ ಹಂತವನ್ನು ತಲುಪಿ ಯುವ ಪೀಳಿಗೆ ಹಾಗೂ ಮಕ್ಕಳನ್ನು ತಂಬಾಕು ಸೇವನೆಯ ಚಟದಿಂದ ಬಿಡಿಸಬೇಕು ಎಂದರು.
ಯಾವುದೇ ತಂಬಾಕು ಸಂಸ್ಥೆಗಳು ತಮ್ಮ ಬ್ರಾಂಡ್ ಹಾಗೂ ಥೀಮ್ ಗಳನ್ನು ಪ್ರಚಾರ ಮಾಡುವಂತಿಲ್ಲ. ಈಗಾಗಲೇ ಕೆಲವು ಶಾಪ್ ಗಳಲ್ಲಿ ತಂಬಾಕು ಸಂಬಂಧಿಸಿದ ಜಾಹೀರಾತುಗಳು ಏನಾದರೂ ಇದ್ದರೆ ಅವುಗಳನ್ನು ತಕ್ಷಣವೇ ತೆರವುಗೊಸುವಂತೆ ಅಂಗಡಿ ಅಥವಾ ಶಾಪ್ ಮಾಲೀಕನಿಗೆ ತಿಳಿಸಬೇಕು ಎಂದು ಹೇಳಿದರು.
ತಂಬಾಕು ಹಾಗೂ ಇತರೆ ಚಟಗಳಿಗೆ ಹೆಚ್ಚಾಗಿ ವ್ಯಸನಿಗಳಾಗುವವರು ಅನಕ್ಷರಸ್ಥರು ಹಾಗೂ ತಂಬಾಕಿನ ಪರಿಣಾಮದ ಬಗ್ಗೆ ಕಡಿಮೆ ಶಿಕ್ಷಣ ಹೊಂದಿರುವವರು. ಹಾಗಾಗಿ ಅಂತವರಿಗೆ ತಂಬಾಕಿನಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿ ತಂಬಾಕು ಸೇವನೆ ಮುಕ್ತರನ್ನಾಗಿ ಮಾಡಬೇಕು ಎಂದರು.
ತಂಬಾಕು ಎನ್ ಪೊರ್ಸ್ ಮೆಂಟ್ ತಂಡದವರು ಜಿಲ್ಲೆಯಾದ್ಯಂತ ಡ್ರೈವ್ ಮಾಡುವ ಮೂಲಕ ನಿಯಮಬಾಹಿರವಾಗಿ ಸಾರ್ವಜನಿಕವಾಗಿ ಅಥವಾ ಯಾವುದೇ ಅಂಗಡಿಗಳಲ್ಲಿ ನೀಡಿರುವ ಜಾಹೀರಾತುಗಳನ್ನು ತೆರವುಗೊಳಿಸಬೇಕು. ತಂಬಾಕು ಮಾರಾಟ ಮಾಡುವ ಅಂಗಡಿಗಳನ್ನು ಗುರುತಿಸಿ ಅಂಗಡಿಗೆ ಸರಬರಾಜು ಮಾಡುತ್ತಿರುವ ತಂಬಾಕಿನ ಮೂಲ ಕಂಪನಿ ಅಥವಾ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪಿ ಸಿ ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಸವಿತಾ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…