ಮೈಸೂರು ನಗರ

ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡಿದರೆ ಹೆಚ್ಚಿನ ದಂಡ ವಿಧಿಸಿ, ಕಠಿಣ ಶಿಕ್ಷೆ ನೀಡಿ: ಡಾ.ಪಿ.ಶಿವರಾಜು

ಮೈಸೂರು:  ಶಾಲಾ- ಕಾಲೇಜಿನ ಸುತ್ತ-ಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅಂತಹ ವ್ಯಕ್ತಿ ಅಥವಾ ಅಂಗಡಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಎಚ್ಚರಿಕೆ ನೀಡಿದರು.

ಇಂದು(ಆ.23) ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ “ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನ ಸಭೆ”ಯಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜಿನ ಮಕ್ಕಳು ತಂಬಾಕು ಸೇವನೆಗೆ ಒಳಗಾಗುತ್ತಿದ್ದಾರೆ. ಶಾಲಾ ಕಾಲೇಜುಗಳ ಸುತ್ತ – ಮುತ್ತ ಇರುವ ಪೆಟ್ಟಿ ಅಂಗಡಿಗಳು ಹಾಗೂ ವ್ಯಕ್ತಿಗಳು ಯಾರಿಗೂ ತಿಳಿಯದಂತೆ ತಂಬಾಕುಗಳನ್ನು ಮಕ್ಕಳಿಗೆ ಮಾರಾಟ ಮಾಡಿ, ಮಕ್ಕಳನ್ನು ವ್ಯಸನಿಗಳನ್ನಾಗಿ ಮಾಡುತ್ತಿದ್ದಾರೆ. ಅಂತಹವರನ್ನು ಗುರುತಿಸಿ ಕಠಿಣ ಶಿಕ್ಷೆ ಹಾಗೂ ದಂಡವನ್ನು ವಿಧಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ ಅಧಿಕಾರಿಗಳು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ತಂಬಾಕು ಸೇವನೆಯ ಸಂಬಂಧ ಕಾರ್ಯಕ್ರಮಗಳನ್ನು ರೂಪಿಸಿ ಮಕ್ಕಳಿಗೆ ಅವುಗಳ ಮೂಲಕ ಜಾಗೃತಿ ಮೂಡಿಸಬೇಕು. ಇದನ್ನು ಅಧಿಕಾರಿಗಳು ನಿರ್ಲಕ್ಷಿಸದರೆ ಮುಂದೆ ನಮ್ಮ ಮಕ್ಕಳೇ ಚಟಕ್ಕೆ ಬಲಿಯಾಗುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಇಂದಿನಿಂದಲೇ ನಿಯಮ ಬಾಹಿರ ತಂಬಾಕು ಮಾರಾಟ ಹಾಗೂ ಸೇವನೆಯನ್ನು ತಡೆಗಟ್ಟಲು ಮುಂದಾಗಬೇಕು ಎಂದು ಹೇಳಿದರು.

ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವಂತಹ ಅಂಗಡಿಯ ಪರವಾನಗಿಯನ್ನು ರದ್ದು ಮಾಡಿ, ಅಂಗಡಿ ಮಾಲೀಕನಿಗೆ ದಂಡವನ್ನು ವಿಧಿಸಬೇಕು. ಸಾರ್ವಜನಿಕವಾಗಿ ತಂಬಾಕು ಸೇವನೆ ಮಾಡುವವರಿಗೆ ದಂಡ ಹಾಕಬೇಕು ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಪ್ರಸ್ತುತ ಜಿಲ್ಲೆಯ ತಂಬಾಕು ಸೇವನೆಯ ಪ್ರಮಾಣದಲ್ಲಿ ನಾವು ನಿಯಂತ್ರಣದ ಹಂತದಲ್ಲಿದ್ದು, ಮುಂದೆ ನಿರ್ಮೂಲನೆಯ ಹಂತವನ್ನು ತಲುಪಿ ಯುವ ಪೀಳಿಗೆ ಹಾಗೂ ಮಕ್ಕಳನ್ನು ತಂಬಾಕು ಸೇವನೆಯ ಚಟದಿಂದ ಬಿಡಿಸಬೇಕು ಎಂದರು.

ಯಾವುದೇ ತಂಬಾಕು ಸಂಸ್ಥೆಗಳು ತಮ್ಮ ಬ್ರಾಂಡ್ ಹಾಗೂ ಥೀಮ್ ಗಳನ್ನು ಪ್ರಚಾರ ಮಾಡುವಂತಿಲ್ಲ. ಈಗಾಗಲೇ ಕೆಲವು ಶಾಪ್ ಗಳಲ್ಲಿ ತಂಬಾಕು ಸಂಬಂಧಿಸಿದ ಜಾಹೀರಾತುಗಳು ಏನಾದರೂ ಇದ್ದರೆ ಅವುಗಳನ್ನು ತಕ್ಷಣವೇ ತೆರವುಗೊಸುವಂತೆ ಅಂಗಡಿ ಅಥವಾ ಶಾಪ್ ಮಾಲೀಕನಿಗೆ ತಿಳಿಸಬೇಕು ಎಂದು ಹೇಳಿದರು.

ತಂಬಾಕು ಹಾಗೂ ಇತರೆ ಚಟಗಳಿಗೆ ಹೆಚ್ಚಾಗಿ ವ್ಯಸನಿಗಳಾಗುವವರು ಅನಕ್ಷರಸ್ಥರು ಹಾಗೂ ತಂಬಾಕಿನ ಪರಿಣಾಮದ ಬಗ್ಗೆ ಕಡಿಮೆ ಶಿಕ್ಷಣ ಹೊಂದಿರುವವರು. ಹಾಗಾಗಿ ಅಂತವರಿಗೆ ತಂಬಾಕಿನಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿ ತಂಬಾಕು ಸೇವನೆ ಮುಕ್ತರನ್ನಾಗಿ ಮಾಡಬೇಕು ಎಂದರು.

ತಂಬಾಕು ಎನ್ ಪೊರ್ಸ್ ಮೆಂಟ್ ತಂಡದವರು ಜಿಲ್ಲೆಯಾದ್ಯಂತ ಡ್ರೈವ್ ಮಾಡುವ ಮೂಲಕ ನಿಯಮಬಾಹಿರವಾಗಿ ಸಾರ್ವಜನಿಕವಾಗಿ ಅಥವಾ ಯಾವುದೇ ಅಂಗಡಿಗಳಲ್ಲಿ ನೀಡಿರುವ ಜಾಹೀರಾತುಗಳನ್ನು ತೆರವುಗೊಳಿಸಬೇಕು. ತಂಬಾಕು ಮಾರಾಟ ಮಾಡುವ ಅಂಗಡಿಗಳನ್ನು ಗುರುತಿಸಿ ಅಂಗಡಿಗೆ ಸರಬರಾಜು ಮಾಡುತ್ತಿರುವ ತಂಬಾಕಿನ ಮೂಲ ಕಂಪನಿ ಅಥವಾ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪಿ ಸಿ ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಸವಿತಾ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

45 mins ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

1 hour ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

3 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

4 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

7 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

7 hours ago