ಮೈಸೂರು ನಗರ

ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡಿದರೆ ಹೆಚ್ಚಿನ ದಂಡ ವಿಧಿಸಿ, ಕಠಿಣ ಶಿಕ್ಷೆ ನೀಡಿ: ಡಾ.ಪಿ.ಶಿವರಾಜು

ಮೈಸೂರು:  ಶಾಲಾ- ಕಾಲೇಜಿನ ಸುತ್ತ-ಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅಂತಹ ವ್ಯಕ್ತಿ ಅಥವಾ ಅಂಗಡಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಎಚ್ಚರಿಕೆ ನೀಡಿದರು.

ಇಂದು(ಆ.23) ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ “ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನ ಸಭೆ”ಯಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜಿನ ಮಕ್ಕಳು ತಂಬಾಕು ಸೇವನೆಗೆ ಒಳಗಾಗುತ್ತಿದ್ದಾರೆ. ಶಾಲಾ ಕಾಲೇಜುಗಳ ಸುತ್ತ – ಮುತ್ತ ಇರುವ ಪೆಟ್ಟಿ ಅಂಗಡಿಗಳು ಹಾಗೂ ವ್ಯಕ್ತಿಗಳು ಯಾರಿಗೂ ತಿಳಿಯದಂತೆ ತಂಬಾಕುಗಳನ್ನು ಮಕ್ಕಳಿಗೆ ಮಾರಾಟ ಮಾಡಿ, ಮಕ್ಕಳನ್ನು ವ್ಯಸನಿಗಳನ್ನಾಗಿ ಮಾಡುತ್ತಿದ್ದಾರೆ. ಅಂತಹವರನ್ನು ಗುರುತಿಸಿ ಕಠಿಣ ಶಿಕ್ಷೆ ಹಾಗೂ ದಂಡವನ್ನು ವಿಧಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ ಅಧಿಕಾರಿಗಳು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ತಂಬಾಕು ಸೇವನೆಯ ಸಂಬಂಧ ಕಾರ್ಯಕ್ರಮಗಳನ್ನು ರೂಪಿಸಿ ಮಕ್ಕಳಿಗೆ ಅವುಗಳ ಮೂಲಕ ಜಾಗೃತಿ ಮೂಡಿಸಬೇಕು. ಇದನ್ನು ಅಧಿಕಾರಿಗಳು ನಿರ್ಲಕ್ಷಿಸದರೆ ಮುಂದೆ ನಮ್ಮ ಮಕ್ಕಳೇ ಚಟಕ್ಕೆ ಬಲಿಯಾಗುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಇಂದಿನಿಂದಲೇ ನಿಯಮ ಬಾಹಿರ ತಂಬಾಕು ಮಾರಾಟ ಹಾಗೂ ಸೇವನೆಯನ್ನು ತಡೆಗಟ್ಟಲು ಮುಂದಾಗಬೇಕು ಎಂದು ಹೇಳಿದರು.

ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವಂತಹ ಅಂಗಡಿಯ ಪರವಾನಗಿಯನ್ನು ರದ್ದು ಮಾಡಿ, ಅಂಗಡಿ ಮಾಲೀಕನಿಗೆ ದಂಡವನ್ನು ವಿಧಿಸಬೇಕು. ಸಾರ್ವಜನಿಕವಾಗಿ ತಂಬಾಕು ಸೇವನೆ ಮಾಡುವವರಿಗೆ ದಂಡ ಹಾಕಬೇಕು ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಪ್ರಸ್ತುತ ಜಿಲ್ಲೆಯ ತಂಬಾಕು ಸೇವನೆಯ ಪ್ರಮಾಣದಲ್ಲಿ ನಾವು ನಿಯಂತ್ರಣದ ಹಂತದಲ್ಲಿದ್ದು, ಮುಂದೆ ನಿರ್ಮೂಲನೆಯ ಹಂತವನ್ನು ತಲುಪಿ ಯುವ ಪೀಳಿಗೆ ಹಾಗೂ ಮಕ್ಕಳನ್ನು ತಂಬಾಕು ಸೇವನೆಯ ಚಟದಿಂದ ಬಿಡಿಸಬೇಕು ಎಂದರು.

ಯಾವುದೇ ತಂಬಾಕು ಸಂಸ್ಥೆಗಳು ತಮ್ಮ ಬ್ರಾಂಡ್ ಹಾಗೂ ಥೀಮ್ ಗಳನ್ನು ಪ್ರಚಾರ ಮಾಡುವಂತಿಲ್ಲ. ಈಗಾಗಲೇ ಕೆಲವು ಶಾಪ್ ಗಳಲ್ಲಿ ತಂಬಾಕು ಸಂಬಂಧಿಸಿದ ಜಾಹೀರಾತುಗಳು ಏನಾದರೂ ಇದ್ದರೆ ಅವುಗಳನ್ನು ತಕ್ಷಣವೇ ತೆರವುಗೊಸುವಂತೆ ಅಂಗಡಿ ಅಥವಾ ಶಾಪ್ ಮಾಲೀಕನಿಗೆ ತಿಳಿಸಬೇಕು ಎಂದು ಹೇಳಿದರು.

ತಂಬಾಕು ಹಾಗೂ ಇತರೆ ಚಟಗಳಿಗೆ ಹೆಚ್ಚಾಗಿ ವ್ಯಸನಿಗಳಾಗುವವರು ಅನಕ್ಷರಸ್ಥರು ಹಾಗೂ ತಂಬಾಕಿನ ಪರಿಣಾಮದ ಬಗ್ಗೆ ಕಡಿಮೆ ಶಿಕ್ಷಣ ಹೊಂದಿರುವವರು. ಹಾಗಾಗಿ ಅಂತವರಿಗೆ ತಂಬಾಕಿನಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿ ತಂಬಾಕು ಸೇವನೆ ಮುಕ್ತರನ್ನಾಗಿ ಮಾಡಬೇಕು ಎಂದರು.

ತಂಬಾಕು ಎನ್ ಪೊರ್ಸ್ ಮೆಂಟ್ ತಂಡದವರು ಜಿಲ್ಲೆಯಾದ್ಯಂತ ಡ್ರೈವ್ ಮಾಡುವ ಮೂಲಕ ನಿಯಮಬಾಹಿರವಾಗಿ ಸಾರ್ವಜನಿಕವಾಗಿ ಅಥವಾ ಯಾವುದೇ ಅಂಗಡಿಗಳಲ್ಲಿ ನೀಡಿರುವ ಜಾಹೀರಾತುಗಳನ್ನು ತೆರವುಗೊಳಿಸಬೇಕು. ತಂಬಾಕು ಮಾರಾಟ ಮಾಡುವ ಅಂಗಡಿಗಳನ್ನು ಗುರುತಿಸಿ ಅಂಗಡಿಗೆ ಸರಬರಾಜು ಮಾಡುತ್ತಿರುವ ತಂಬಾಕಿನ ಮೂಲ ಕಂಪನಿ ಅಥವಾ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪಿ ಸಿ ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಸವಿತಾ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

8 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago