ಮೈಸೂರು ನಗರ

ಪಡಿತರ ಅಕ್ಕಿ ಅಕ್ರಮ ಸಾಗಣೆ : ವಶ

ಮೈಸೂರು : ಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವ ಯುವಕನನ್ನು ಬಂಧಿಸಿರುವ ಜಯಪುರ ಠಾಣಾ ಪೊಲೀಸರು, ಅವರಿಂದ 5.5 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಧನಗಳ್ಳಿ ಗ್ರಾಮದ ಬಳಿ ಯುವಕನೋರ್ವ ಪ್ಯಾಸೆಂಜರ್ ಆಟೋದಲ್ಲಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಬಂದಿದೆ. ಕೂಡಲೇ ಪೊಲಿಸರ ತಂಡ ಸ್ಥಳಕ್ಕೆ ತೆರಳಿದೆ. ಈ ವೇಳೆ ಪ್ಯಾಸೆಂಜರ್ ಆಟೋ ಮೇಲೆ ದಾಳಿ ನಡೆಸಿದ ಪೊಲೀಸರು ಅಕ್ಕಿಯನ್ನು ಸಾಗಿಸುತ್ತಿದ್ದ ಗೌಸಿಯಾನಗರ ನಿವಾಸಿ ಫರ‍್ಹಾನ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಹಳ್ಳಿ ಹಳ್ಳಿಗೆ ತೆರಳಿ ಅಲ್ಲಿನ ಜನರಿಂದ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತೇವೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಪ್ರಕರಣದಲ್ಲಿ ಬಾಗಿಯಾಗಿರುವ ಮತ್ತೊಬ್ಬ ಆರೋಪಿ ಗೌಸಿಯಾನಗರ ನಿವಾಸಿ ಮಯೂಬ್ ಎಂಬಾತನ ಪತ್ತೆಗೆ ಮುಂದಾಗಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

13 mins ago

ಅದ್ಧೂರಿಯಾಗಿ ಬೂದನೂರು ಉತ್ಸವ ಆಚರಣೆ : ಪಿ.ರವಿಕುಮಾರ್

ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…

28 mins ago

ಬಾಲ ನಟ, ನಟಿ : ಜಿಲ್ಲಾಧಿಕಾರಿಯಿಂದ ಅನುಮತಿ ಕಡ್ಡಾಯ

ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…

46 mins ago

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

2 hours ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

2 hours ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

4 hours ago