Mysore
29
overcast clouds

Social Media

ಭಾನುವಾರ, 14 ಜೂನ್ 2026
Light
Dark

ಮರು ಜಾತಿಗಣತಿ ಹೆಸರಿನಲ್ಲಿ ಹಿಂದುಳಿದ ಜಾತಿಗಳನ್ನು ಯಾಮಾರಿಸುವ ಕೆಲಸ: ರಘು ಕೌಟಿಲ್ಯ

raghu kautilya

ಮೈಸೂರು: ಕಾಂತರಾಜು ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಿರುವುದರಿಂದ ಸಿಎಂ ಸಿದ್ದರಾಮಯ್ಯಗೆ ಮುಖಭಂಗವಾಗಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಘುಕೌಟಿಲ್ಯ ಲೇವಡಿ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿವಾದಿತ ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕೈಬಿಡಲು ನಿರ್ಧರಿಸಿದೆ. ಈ ನಿರ್ಧಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಘೋಷಿಸಿದ್ದು, ಹಲವು ಗೊಂದಲಗಳನ್ನು ಹುಟ್ಟುಹಾಕಿದೆ. ರಾಜ್ಯ ಸಚಿವ ಸಂಪುಟ ಕೈಗೊಳ್ಳಬೇಕಾದ ನಿರ್ಣಯವನ್ನು ವೇಣುಗೋಪಾಲ್ ಹೇಗೆ ಪ್ರಕಟಿಸಿದರು? ಎಂದು ಪ್ರಶ್ನಿಸಿದರು.

ಇನ್ನು ಬೆಂಗಳೂರು ಕಾಲ್ತುಳಿತ ಪ್ರಕಣದಿಂದ ಕಾಂಗ್ರೆಸ್ ಪಕ್ಷದ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ಹರಾಜಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉಳಿಸಲು ವಿಷಯಾಂತರ ಮಾಡಲು ಹೈಕಮಾಂಡ್ ಮುಂದಾಗಿದೆ. ಮರು ಜಾತಿಗಣತಿ ಹೆಸರಿನಲ್ಲಿ ಹಿಂದುಳಿದ ಜಾತಿಗಳನ್ನು ಯಾಮಾರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

Tags:
error: Content is protected !!