ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಸಿದ್ದರಾಮಯ್ಯ ಜಾತಿಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಜಾತಿ ಗಣತಿ ಬಿಡುಗಡೆ ಮಾಡಿ ತನ್ನ ಪಕ್ಷ ಹಾಗೂ ಪ್ರತಿಪಕ್ಷ ಇಬ್ಬರನ್ನು ಕುರಿ ಮಾಡ್ತಿದ್ದಾರೆ. ಸರ್ಕಾರದ ಪ್ರಸ್ತುತ ವೈಫಲ್ಯಗಳನ್ನು ಮರೆ ಮಾಚಲು ಸಿದ್ದರಾಮಯ್ಯ ಜಾತಿ ಗಣತಿ ಮುನ್ನೆಲೆಗೆ ಬಿಟ್ಟಿದ್ದಾರೆ. ಈ ಮೂಲಕ ಜಾತಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಹಿಂದೂ ಧರ್ಮವನ್ನು ಒಡೆಯೋಕೆ ಹೊರಟ್ಟಿದ್ದಾರೆ. ಲಿಂಗಾಯತರು, ಒಕ್ಕಲಿಗರು, ಒಬಿಸಿ ಸಂಖ್ಯೆ ಕಡಿಮೆ ಆಯ್ತು ಅನ್ನೋದಷ್ಟೆ ನೋಡಬೇಡಿ. ಒಟ್ಟಾರೆ ಹಿಂದೂಗಳ ಸ್ಥಿತಿ ಏನಾಗಿದೆ ಎಂದು ನೋಡಿ. ನಮ್ಮ ಜಾತಿ ಸಂಖ್ಯೆ ಕಡಿಮೆ ಆಯ್ತು ಅಂತಾ ಪರಸ್ಪರ ಮಂಗಗಳ ಥರ ಕಿತ್ತಾಡಬೇಡಿ ಹಿಂದೂಗಳಾಗಿ ಈ ಜಾತಿ ಗಣತಿ ನೋಡಿ ಎಂದು ಕಿಡಿಕಾರಿದರು.
ಸುದ್ದಿ ಹಿನ್ನೆಲೆ :- ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚಿಸಿ ನಿರ್ಧಾರ : ಸಿ. ಎಂ. ಸಿದ್ದರಾಮಯ್ಯ
ಇನ್ನು ಮುಂದುವರಿದು ಮಾತನಾಡಿದ ಅವರು, ಯಾರ ಮನೆಗೆ ಬಂದು ಜಾತಿ ಗಣತಿ ಮಾಡಿದ್ದಾರೆ? ಎಲ್ಲರನ್ನು ಸಿಎಂ ಕುರಿ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಆಗ ಅಹಿಂದ ಅಂತಾ ಒಂದು ವರ್ಗ ಒಡೆದರು. ಈಗ ಜಾತಿ ಗಣತಿ ಹೆಸರಲ್ಲಿ ಇಡೀ ಹಿಂದೂ ಧರ್ಮ ಒಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ಇನ್ನು ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ. ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಆಗುತ್ತಿವೆ. ಮುಡಾ ಹಗರಣ, ವಾಲ್ಮೀಕಿ ಹಗರಣ ನಡೆದಿದೆ. ಇವೆಲ್ಲವನ್ನು ಮರೆ ಮಾಚಲು ಜಾತಿಗಣತಿ ಬಿಟ್ಟಿದ್ದಾರೆ. ಇದು ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಮಾಡುತ್ತಿರುವ ನಾಟಕ. ಲಿಂಗಾಯತರಿಗೆ, ಒಕ್ಕಲಿಗರು, ಒಬಿಸಿ ಎಂದು ಉಪ ಜಾತಿ ಲೆಕ್ಕ ಹಾಕಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್ನರಲ್ಲಿ ಯಾಕೆ ಉಪಜಾತಿ ಯಾಕೆ ಲೆಕ್ಕ ಹಾಕಿಲ್ಲ ಎಂದು ಪ್ರಶ್ನೆ ಮಾಡಿದರು.
ಇನ್ನು ವೀರಶೈವ ಲಿಂಗಾಯತ ಪ್ರತ್ಯೇಕ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ 36 ಜನ ವೀರಶೈವ ಲಿಂಗಾಯತ ಶಾಸಕರಿದ್ದಾರೆ. ಹಾಗಾಗಿ ಅವರೆಲ್ಲಾ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸಿದ್ದರಾಮಯ್ಯ ಬಳಿ ಕೇಳಲಿ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕೂಡ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಕೇಳಲಿ ಎಂದು ಆಗ್ರಹಿಸಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…