yaduveer
ಮೈಸೂರು: ಎಸ್ಟಿ ಪಟ್ಟಿಗೆ ಕುರುಬ ಸಮುದಾಯವನ್ನು ಸೇರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಯಾಕೆ ಈ ರೀತಿ ನಿಲುವು ತೆಗೆದುಕೊಳ್ಳುತ್ತಿದೆ ನಮಗೆ ಗೊತ್ತಿಲ್ಲ. ಸಂವಿಧಾನದ ಆಶಯದಂತೆ ನಾವೆಲ್ಲಾ ನಡೆಯಬೇಕು ಎಂದು ಹೇಳಿದರು.
ಇದನ್ನು ಓದಿ : ಮೈಸೂರು ದಸರಾ | ಅರಮನೆ ಸುತ್ತ ಸ್ಥಳಪರಿಶೀಲಿಸಿದ ಆಯುಕ್ತರು
ಇನ್ನು ಕ್ರಿಶ್ಚಿಯನ್ ಕಾಲಂನಲ್ಲಿ ಹಿಂದೂ ಉಪಜಾತಿಗಳ ಹೆಸರು ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಸರಿಯಲ್ಲ. ಈ ಹಿಂದೆ ಈ ರೀತಿ ಜಾತಿ ಹೆಸರು ಇಲ್ಲ. ಯಾರನ್ನೋ ಮೆಚ್ಚಿಸುವ ಸಲುವಾತಿ ಹೊಸ ಜಾತಿ ಸೃಷ್ಟಿ ಆಗುತ್ತಿದೆ. ಈಗಾಗಲೇ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಯಾವುದೇ ಕಾರಣಕ್ಕೂ ಹೊಸ ಜಾತಿಗಳ ಸೇರ್ಪಡೆಗೆ ಒಪ್ಪುವುದಿಲ್ಲ ಎಂದು ಹೇಳಿದರು.
ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಡಾದಲ್ಲಿ ಅಕ್ರಮ ಆಗಿದೆ. ಹೀಗಾಗಿ ತನಿಖೆ ನಡೆಯುತ್ತಿದೆ. ನಾವು ಹಿಂದೇನೆ ಸಮಗ್ರ ತನಿಖೆ ಆಗ್ಬೇಕು ಎಂದು ಹೇಳಿದ್ವಿ. ಈಗ ದಿನೇಶ್ ಕುಮಾರ್ ಬಂಧನ ಮಾಡಿದ್ದಾರೆ. ಮುಡಾ ಅಕ್ರಮದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಅವರ ಮೇಲೂ ತನಿಖೆ ಆಗಲಿ ಎಂದು ಆಗ್ರಹಿಸಿದರು.
ಇನ್ನು ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಸ್.ಐ.ಟಿ ತನಿಖೆಯನ್ನು ಸ್ವಾಗತಿಸಿದ್ದೇವೆ. ತನಿಖೆಯಿಂದ ಈಗಾಗಲೇ ಸತ್ಯ ಏನು ಎಂದು ಎಲ್ಲರಿಗೂ ಗೊತ್ತಾಗಿದೆ. ಇನ್ನು ಏನು ಬೇಕಾದ್ರೂ ತನಿಖೆ ಮಾಡಲಿ. ಧಾರ್ಮಿಕ ಕ್ಷೇತ್ರಕ್ಕೆ ಮಸಿ ಬಳಿಯುವ ಕೆಲಸ ಎಂದು ಜನ ಹೇಳ್ತಿದ್ದಾರೆ. ತನಿಖೆಗೆ ನಮ್ಮ ವಿರೋಧ ಇಲ್ಲ. ಆದ್ರೆ ತನಿಖೆ ವರದಿ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…