ಮೈಸೂರು ನಗರ

ಮೈಸೂರಿನಲ್ಲಿ ಹೆಚ್ಚುತ್ತಿರುವ ಅಪರಾಧಗಳು: ಕಟ್ಟುನಿಟ್ಟಿನ ಕ್ರಮಕ್ಕೆ ಸಂಸದ ಯದುವೀರ್‌ ಒಡೆಯರ್‌ ಸೂಚನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಹಾಜರಿದ್ದ ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಗರದಲ್ಲಿ ನಡೆದ ಗಂಭೀರ ಪ್ರಕರಣಗಳ ಕುರಿತು ವಿವರವಾದ ಮಾಹಿತಿ ಪಡೆದರು.

ಮೈಸೂರಿನಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ನಗರದಲ್ಲಿ ಕಾನೂನು ಸುವ್ಯವಸ್ಥೆ ವಿಫಲಗೊಳ್ಳದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಹಾಗೂ ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಎಲ್‌.ನಾಗೇಂದ್ರ ಉಪ ಪೊಲೀಸ್‌ ಆಯುಕ್ತರಾದ ಬಿಂದುಮಣಿ ಹಾಗೂ ಸುಂದರ್‌ರಾಜ್‌ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago