ಮೈಸೂರು ನಗರ

ಬಾಬುಜಿ ಕಾರ್ಯಕ್ರಮಗಳಿಂದ ಭಾರತ ಆಹಾರದಲ್ಲಿ ಸ್ವಾವಲಂಬಿ: ಎಂ.ಕೆ ಸವಿತಾ

ಮೈಸೂರು: ಭಾರತ ದೇಶ ವಿಶ್ವದಲ್ಲಿಯೇ ಆಹಾರದಲ್ಲಿ ಸ್ವಾವಲಂಬಿಯಾಗಿದೆ. ಇದಕ್ಕೆ ಡಾ.ಬಾಬೂ ಜಗಜೀವನ ರಾಮ್ ಅವರ ಹಸಿರುಕ್ರಾಂತಿ ಕಾರ್ಯಕ್ರಮ ಮುಖ್ಯ ಕಾರಣ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಭಿಪ್ರಾಯಪಟ್ಟರು.

ಮೈಸೂರು ವಿಶ್ವವಿದ್ಯಾನಿಲಯ, ಡಾ.ಬಾಬು ಜಗಜೀವನರಾಮ್ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿಶೇಷ ಘಟಕ ಇವುಗಳ ಸಹಯೋಗದಲ್ಲಿ ಮಾನಸಗಂಗೋತ್ರಿಯ ಡಾ.ಬಾಬು ಜಗಜೀವನರಾಮ್ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದರು.

ಅಪಾರವಾದ ಜ್ಞಾನ, ದೂರದೃಷ್ಟಿಯನ್ನು ಹೊಂದಿದ್ದ ಡಾ.ಬಾಬು ಜಗಜೀವನರಾಮ್ ಅವರು ಭಾರತದಲ್ಲಿ ಹಸಿವು ಮತ್ತು ಬಡತನ ತೊಲಗಬೇಕಾದರೆ ಕೃಷಿ ಕ್ಷೇತ್ರ ಅಭಿವೃದ್ಧಿಯಾಗಬೇಕು ಎಂದು ನಂಬಿದ್ದರು. ಅದಕ್ಕಾಗಿ ಸುಧಾರಿತ ಬಿತ್ತನೆ ಬೀಜಗಳು, ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಜೊತೆಗೆ ಸಕಲ ಸವಲತ್ತುಗಳನ್ನೂ ಒದಗಿಸಿ ಭಾರತ ಆಹಾರದಲ್ಲಿ ಸ್ವಾವಂಬಿಯಾಗಲು ಕಾರಣರಾದರು ಎಂದು ತಿಳಿಸಿದರು.

ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರ್ಯ ಭಾರತದಲ್ಲಿ ದೀರ್ಘಕಾಲದ ವರೆಗೆ ಸಂಸದರಾಗಿ, ವಿವಿಧ ಖಾತೆಗಳ ಸಚಿವರಾಗಿ ಬಡವರು, ಕಾರ್ಮಿಕರು, ದಲಿತರ ಉದ್ಧಾರಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಅವಕಾಶ ವಂಚಿತ ಸಮುದಾಯಗಳಿಗೆ ಹಕ್ಕು ಮತ್ತು ಅವಕಾಶಗಳನ್ನು, ಸಾಮಾಜಿಕ ನ್ಯಾಯ ದೊರಕಿಸಿಕೊಡಲು ಬದುಕಿನುದ್ದಕ್ಕೂ ಹೋರಾಡಿದರು ಎಂದು ಅವರು ಬಣ್ಣಿಸಿದರು.

ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ಡಾ.ಹರೀಶ್‌ಕುಮಾರ್ ಮಾತನಾಡಿ, ಡಾ.ಬಾಬು ಜಗಜೀವನ ರಾಮ್ ಅವರು ಎಲ್ಲಾ ಹಂತದಲ್ಲಿಯೂ ಜಾತಿಯ ಅವಮಾನವನ್ನು ಅನುಭವಿಸಿದರು. ತಮ್ಮ ವಿದ್ಯಾರ್ಥಿ ದಿಶೆಯಲ್ಲಿಯೇ ಅಪಾರವಾದ ಪಾಂಡಿತ್ಯವನ್ನು ಹೊಂದಿದ್ದ ಅವರು ದೇಶದ ಭವಿಷ್ಯ ಮತ್ತು ಶೋಷಿತ ಸಮುದಾಯಗಳ ಬಿಡುಗಡೆಯ ಬಗ್ಗೆ ನಿಶ್ಚಿತ ನಿಲುವನ್ನು ತಳೆದಿದ್ದರು ಎಂದು ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಗಂಗಾಧರ, ಡಾ.ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣ ಕೇಂದ್ರದ ನಿರ್ದೇಶಕ ಪ್ರೊ.ಆರ್.ತಿಮ್ಮರಾಯಪ್ಪ, ಮೈಸೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ಉಪಕುಲಸಚಿವ ಕೆ.ಎನ್.ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

4 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

6 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

7 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

11 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

14 hours ago