ಮೈಸೂರು ನಗರ

ಮೈಸೂರು| ಮಹಾರಾಣಿ ಕಾಲೇಜು ಕ್ಯಾಂಪಸ್‌ಗೆ ಬಂತು ಇಂದಿರಾ ಕ್ಯಾಂಟೀನ್

ಮೈಸೂರು: ಪಡುವಾರಹಳ್ಳಿಯ ಮಹಾರಾಣಿ ಪದವಿ ಕಾಲೇಜು ಬಳಿ ಇಂದಿರಾ ಕ್ಯಾಂಟೀನ್‌ ಪ್ರಾರಂಭವಾಗಿದ್ದು, ವಿದ್ಯಾರ್ಥಿನಿಯರು ಖುಷಿ ಖುಷಿಯಿಂದಲೇ ತಿಂಡಿ ಹಾಗೂ ಊಟ ಸವಿಯುತ್ತಿದ್ದಾರೆ.

ಇತ್ತೀಚೆಗೆ ಸ್ಥಳೀಯ ಶಾಸಕ ಹರೀಶ್ ಗೌಡ ಅವರು ಇಂದಿರಾ ಕ್ಯಾಂಟೀನ್‌ನ್ನು ಲೋಕಾರ್ಪಣೆಗೊಳಿಸಿದ್ದು, ಇದರಿಂದ ಗ್ರಾಮೀಣ ಭಾಗದಿಂದ ಬರುವ ನೂರಾರು ವಿದ್ಯಾರ್ಥಿನಿಯರ ಹಸಿವು ನೀಗಿಸುವಂತಾಗಿದೆ.

ಮುಂಜಾನೆ ತಿಂಡಿ ತಿನ್ನದೆ ಬರುವ ಎಷ್ಟೋ ಮಕ್ಕಳಿಗೆ ಈ ಕ್ಯಾಂಟೀನ್‌ನಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನ ಊಟದ ವ್ಯವಸ್ಥೆಯಿದ್ದು, ಕೇವಲ 5 ರೂಗೆ ತಿಂಡಿ ಹಾಗೂ 10 ರೂಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಇಂದಿರಾ ಕ್ಯಾಂಟೀನ್‌ ಆರಂಭಕ್ಕೂ ಮುನ್ನ ವಿದ್ಯಾರ್ಥಿನಿಯರು ಹೆಚ್ಚು ಹೆಚ್ಚು ಹಣ ಕೊಟ್ಟು ಕಾಲೇಜಿನ ಅಕ್ಕಪಕ್ಕದ ಹೋಟೆಲ್‌ಗಳಿಗೆ ಹೋಗುತ್ತಿದ್ದರು. ಇನ್ನೂ ಕೆಲ ವಿದ್ಯಾರ್ಥಿನಿಯರು
ಮನೆಯಿಂದ ಊಟದ ಬಾಕ್ಸ್ ತಂದು ಮಧ್ಯಾಹ್ನದ ಊಟ ಮಾಡುತ್ತಿದ್ದರು. ಆದರೆ ಈಗ ಅಗ್ಗದ ದರದಲ್ಲಿ ಬೆಳಗಿನ ತಿಂಡಿ ಹಾಗೂ ಮಧ್ಯಾಹ್ನದ ಊಟ ಸವಿದು ಖುಷಿ ಪಡುತ್ತಿದ್ದಾರೆ.

ಇನ್ನು ಇಂದಿರಾ ಕ್ಯಾಂಟೀನ್‌ನಲ್ಲಿ ಬೆಳಗ್ಗೆ 7.30 ರಿಂದ 10 ಗಂಟೆವರಗೆ ಬೆಳಿಗ್ಗೆ ತಿಂಡಿ ಮತ್ತು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆವರೆಗೆ ಮಧ್ಯಾಹ್ನದ ಊಟ ವಿತರಿಸಲಾಗುತ್ತದೆ.

ಈ ಬಗ್ಗೆ ಮಾತನಾಡಿರುವ ಊಟ ತಯಾರಕರು, ನಾವು ಈ ಕ್ಯಾಂಟೀನ್‌ನಲ್ಲಿ ಗುಣಮಟ್ಟದ ತಿಂಡಿ ಹಾಗೂ ಊಟ ನೀಡುತ್ತಿದ್ದೇವೆ. ಮೊನ್ನೆ ತಾನೆ ಕ್ಯಾಂಟೀನ್‌ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಇಲ್ಲಿಗೆ ಬರುವ ಭರವಸೆ ಇದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

4 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

6 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

6 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

6 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

7 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

7 hours ago