ಮೈಸೂರು ನಗರ

ಮೈಸೂರು| ಮಹಾರಾಣಿ ಕಾಲೇಜು ಕ್ಯಾಂಪಸ್‌ಗೆ ಬಂತು ಇಂದಿರಾ ಕ್ಯಾಂಟೀನ್

ಮೈಸೂರು: ಪಡುವಾರಹಳ್ಳಿಯ ಮಹಾರಾಣಿ ಪದವಿ ಕಾಲೇಜು ಬಳಿ ಇಂದಿರಾ ಕ್ಯಾಂಟೀನ್‌ ಪ್ರಾರಂಭವಾಗಿದ್ದು, ವಿದ್ಯಾರ್ಥಿನಿಯರು ಖುಷಿ ಖುಷಿಯಿಂದಲೇ ತಿಂಡಿ ಹಾಗೂ ಊಟ ಸವಿಯುತ್ತಿದ್ದಾರೆ.

ಇತ್ತೀಚೆಗೆ ಸ್ಥಳೀಯ ಶಾಸಕ ಹರೀಶ್ ಗೌಡ ಅವರು ಇಂದಿರಾ ಕ್ಯಾಂಟೀನ್‌ನ್ನು ಲೋಕಾರ್ಪಣೆಗೊಳಿಸಿದ್ದು, ಇದರಿಂದ ಗ್ರಾಮೀಣ ಭಾಗದಿಂದ ಬರುವ ನೂರಾರು ವಿದ್ಯಾರ್ಥಿನಿಯರ ಹಸಿವು ನೀಗಿಸುವಂತಾಗಿದೆ.

ಮುಂಜಾನೆ ತಿಂಡಿ ತಿನ್ನದೆ ಬರುವ ಎಷ್ಟೋ ಮಕ್ಕಳಿಗೆ ಈ ಕ್ಯಾಂಟೀನ್‌ನಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನ ಊಟದ ವ್ಯವಸ್ಥೆಯಿದ್ದು, ಕೇವಲ 5 ರೂಗೆ ತಿಂಡಿ ಹಾಗೂ 10 ರೂಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಇಂದಿರಾ ಕ್ಯಾಂಟೀನ್‌ ಆರಂಭಕ್ಕೂ ಮುನ್ನ ವಿದ್ಯಾರ್ಥಿನಿಯರು ಹೆಚ್ಚು ಹೆಚ್ಚು ಹಣ ಕೊಟ್ಟು ಕಾಲೇಜಿನ ಅಕ್ಕಪಕ್ಕದ ಹೋಟೆಲ್‌ಗಳಿಗೆ ಹೋಗುತ್ತಿದ್ದರು. ಇನ್ನೂ ಕೆಲ ವಿದ್ಯಾರ್ಥಿನಿಯರು
ಮನೆಯಿಂದ ಊಟದ ಬಾಕ್ಸ್ ತಂದು ಮಧ್ಯಾಹ್ನದ ಊಟ ಮಾಡುತ್ತಿದ್ದರು. ಆದರೆ ಈಗ ಅಗ್ಗದ ದರದಲ್ಲಿ ಬೆಳಗಿನ ತಿಂಡಿ ಹಾಗೂ ಮಧ್ಯಾಹ್ನದ ಊಟ ಸವಿದು ಖುಷಿ ಪಡುತ್ತಿದ್ದಾರೆ.

ಇನ್ನು ಇಂದಿರಾ ಕ್ಯಾಂಟೀನ್‌ನಲ್ಲಿ ಬೆಳಗ್ಗೆ 7.30 ರಿಂದ 10 ಗಂಟೆವರಗೆ ಬೆಳಿಗ್ಗೆ ತಿಂಡಿ ಮತ್ತು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆವರೆಗೆ ಮಧ್ಯಾಹ್ನದ ಊಟ ವಿತರಿಸಲಾಗುತ್ತದೆ.

ಈ ಬಗ್ಗೆ ಮಾತನಾಡಿರುವ ಊಟ ತಯಾರಕರು, ನಾವು ಈ ಕ್ಯಾಂಟೀನ್‌ನಲ್ಲಿ ಗುಣಮಟ್ಟದ ತಿಂಡಿ ಹಾಗೂ ಊಟ ನೀಡುತ್ತಿದ್ದೇವೆ. ಮೊನ್ನೆ ತಾನೆ ಕ್ಯಾಂಟೀನ್‌ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಇಲ್ಲಿಗೆ ಬರುವ ಭರವಸೆ ಇದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

39 mins ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

1 hour ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

2 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

7 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

7 hours ago