ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು ಮೈಸೂರು ಭಾಗದಿಂದ ಸ್ವಯಂ ಪ್ರೇರಿತರಾಗಿ ಸಾವಿರಾರು ಮಂದಿ ಭಾಗವಹಿಸಬೇಕು ಎಂದು ಮುಖಂಡ ನಾಗವಾಲ ನರೇಂದ್ರ ಮನವಿ ಮಾಡಿದರು.
ಮಂಗಳವಾರ ನಗರದ ಖಾಸಗಿ ಹೋಟೆಲ್ನಲ್ಲಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಏರ್ಪಡಿಸಲಾಗಿದ್ದ ಮಾ.23 ಮೈಸೂರಿನಲ್ಲಿ ಮಾ.25 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ಅವೈಜ್ಞಾನಿಕ ವರದಿಯನ್ನು ನಾವೆಲ್ಲರೂ ತಿರಸ್ಕರಿಸಬೇಕು. ಇಷ್ಟು ದಿವಸ ಹೊಲಯ ಹಾಗೂ ಮಾದಿಗರು ಸಹೋದರರೆಂದು ಭಾವಿಸಿದ್ದೆವು ಎಂದು ಹೇಳಿದರು.
ಆದರೆ, ಒಳ ಮೀಸಲಾತಿ ಹಂಚಿಕೆ ಮುನ್ನೆಲೆಗೆ ಬಂದ ಮೇಲೆ ಅದು ಸುಳ್ಳೆಂಬುದು ಸಾಬೀತಾಗಿದೆ. ಸಮೀಕ್ಷೆ ಯಲ್ಲಿ ಹೊಲೆಯ ಜನಾಂಗದವರು ಸರಿಯಾಗಿ ಪಾಲ್ಗೊಳ್ಳದೇ ವ್ಯತ್ಯಾಸವಾಗಿದೆ. ಪ್ರಾದೇಶಿಕವಾರು ಭಿನ್ನಭಿನ್ನವಾಗಿ ಜಾತಿಯನ್ನು ನಮೂದಿಸಿ ತೊಂದರೆಗೆ ಸಿಲುಕುವಂತಾಗಿದೆ ಎಂದರು.
ನಮ್ಮ ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿರುವ ಒಳ ಮೀಸಲಾತಿಯನ್ನು ತಿರಸ್ಕರಿಸಬೇಕೆಂಬುದು ನಮ್ಮ ಆಗ್ರಹವಾಗಿದೆ. ನಾವು ಕೂಡ ಸ್ವಾಭಿಮಾನಿಗಳು. ನಮ್ಮ ನಾಯಕರುಗಳಿಗೆ ಚಪ್ಪಾಲಿಯಲ್ಲಿ ಹೊಡೆಯುವವರ ಪರವಾಗಿ ನಿಲ್ಲಬೇಕಾದ ಅಗತ್ಯ ನಮಗಿಲ್ಲ ಎಂದು ಹೇಳಿದರು.
ಮಾಜಿ ಗ್ರಾಪಂ ಮಾಜಿ ಅಧ್ಯಕ್ಷ ಬೋಗಾದಿ ನಾಗರಾಜ್ ಮಾತನಾಡಿ, ಮಾದಿಗ ಸಮುದಾಯದವರು ನಮ್ಮನ್ನು ಯುದ್ಧಕ್ಕೆ ಕರೆಯುತ್ತಿದ್ದಾರೆ. ರಕ್ತಪಾತವಾಗುತ್ತದೆ ಎಂದು ಭಾಷಣ ಮಾಡುತ್ತಾರೆ. ನಮ್ಮಿಂದಲೇ ಬಾಷಣ ಮಾಡುವುದನ್ನು ಕಲಿತವರಿಗೆ ಹೇಗೆ ಉತ್ತರ ಕೊಡಬೇಕು ಎಂಬುದು ನಮಗೆ ಗೊತ್ತಿದೆ ಎಂದರು.
ಸಚಿವ ಹೆಚ್.ಸಿ.ಮಹದೇವಪ್ಪ ಅವರ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದವರು ಕೆ.ಎಚ್.ಮುನಿಯಪ್ಪ ಅವರಿಗೆ ಯಾಕೇ ಹೊಡೆಯಲಿಲ್ಲ. ಒಳ ಮೀಸಲಾತಿ ರಾಜಕಾರಣದ ಕುತಂತ್ರ. ಅದನ್ನು ವಿರೋಧಿಸಬೇಕು. ಪ್ರತಿಭಟನೆಯಲ್ಲಿ ಕನಿಷ್ಠ 6 ಲಕ್ಷ ಜನರು ಸೇರಬೇಕು ಎಂದು ಹೇಳಿದರು.
ಸಮಿತಿ ರಚನೆ
ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನಾ ರ್ಯಾಲಿ ಯಶಸ್ವಿಯಾಗಬೇಕಾದಲ್ಲಿ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದಲ್ಲಿ ಸಮಿತಿಗಳಾಗಬೇಕು. ಪ್ರತೀ ಗ್ರಾಮದಲ್ಲಿಯೂ ಪಂಚಾಯ್ತಿ ಸೇರಿಸಿ ಸಮಾವೇಶದ ಮಹತ್ವದ ಬಗ್ಗೆ ತಿಳಿಸಬೇಕು ಎಂದು ಮುಖಂಡರು ಸಲಹೆ ನೀಡಿದರು.
ಸಂವಿದಾನ ನೀಡಿರುವ ಹಕ್ಕನ್ನು ಬಳಸಿಕೊಂಡು ಉನ್ನತ ಸ್ಥಾಲದಲ್ಲಿ ಇದ್ದ ಹಾಗೂ ಇರುವ ನಮ್ಮ ಸಮುದಾಯದ ಸಾಕಷ್ಟು ಸ್ಥಿತಿವಂತರಿದ್ದಾರೆ. ಅವರುಗಳು ಮೌನವಾಗಿರಬಾರದು. ಸಮಾವೇಶ ಯಶಸ್ಸಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದು ಕರೆ ನೀಡಿದರು.
ಪ್ರತೀ ತಾಲ್ಲೂಕು ಮಟ್ಟದಿಂದ ಅಂದು ಬಸ್ಗಳ ವ್ಯವಸ್ಥೆ ಮಾಡಬೇಕು, ಭಾಗವಹಿಸುವವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಬೇಕು. ಇದಕ್ಕೆ ನಮ್ಮ ಮುಖಂಡರು ಹಾಗೂ ಸ್ವಾಭಿಮಾನಿ ದಲಿತರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಶಾಸಕ ನಂಜುಂಡಸ್ವಾಮಿ, ಅತಿಥಿ ಉಪನ್ಯಾಸಕ ಡಾ. ಪ್ರತಾಪ್, ಬಿಳಿಗೆರೆ ರಾಜಣ್ಣ, ರಮೇಶ್, ಮೂರ್ತಿ, ಭುಗತಹಳ್ಳಿ ಮಣಿಯಯ್ಯ, ಜಿಪಂ ಮಾಜಿ ಸದಸ್ಯ ಚನ್ನಪ್ಪ, ಸೋಮಶೇಖರ್, ಜವರಪ್ಪ, ದಸಂಸ ಸಂಚಾಲಕ ಚೋರನಹಳ್ಳಿ ಶಿವಣ್ಣ, ಬೆಳವಾಡಿ ಶಿವಕುಮಾರ್, ಡಾ.ಎಸ್.ಮೂರ್ತಿ ಕಲ್ಲಹಳ್ಳಿ, ಕಲ್ಲಹಳ್ಳಿ ಕುಮಾರ್ ಮುಂತಾದವರಿದ್ದರು.
ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…
ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…
ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…
ಹೆಚ್.ಎಸ್. ದಿನೇಶ್ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…