ಮೈಸೂರು ನಗರ

ಒಳಮೀಸಲಾತಿಯಲ್ಲಿ ಬಲಗೈಗೆ ಅನ್ಯಾಯ : ಮಾ.25ಕ್ಕೆ ಬೆಂಗಳೂರಲ್ಲಿ ಬೃಹತ್‌ ಸಮಾವೇಶ

ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು ಮೈಸೂರು ಭಾಗದಿಂದ ಸ್ವಯಂ ಪ್ರೇರಿತರಾಗಿ ಸಾವಿರಾರು ಮಂದಿ ಭಾಗವಹಿಸಬೇಕು ಎಂದು ಮುಖಂಡ ನಾಗವಾಲ ನರೇಂದ್ರ ಮನವಿ ಮಾಡಿದರು.

ಮಂಗಳವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಏರ್ಪಡಿಸಲಾಗಿದ್ದ ಮಾ.23 ಮೈಸೂರಿನಲ್ಲಿ ಮಾ.25 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ಅವೈಜ್ಞಾನಿಕ ವರದಿಯನ್ನು ನಾವೆಲ್ಲರೂ ತಿರಸ್ಕರಿಸಬೇಕು. ಇಷ್ಟು ದಿವಸ ಹೊಲಯ ಹಾಗೂ ಮಾದಿಗರು ಸಹೋದರರೆಂದು ಭಾವಿಸಿದ್ದೆವು ಎಂದು ಹೇಳಿದರು.

ಆದರೆ, ಒಳ ಮೀಸಲಾತಿ ಹಂಚಿಕೆ ಮುನ್ನೆಲೆಗೆ ಬಂದ ಮೇಲೆ ಅದು ಸುಳ್ಳೆಂಬುದು ಸಾಬೀತಾಗಿದೆ. ಸಮೀಕ್ಷೆ ಯಲ್ಲಿ ಹೊಲೆಯ ಜನಾಂಗದವರು ಸರಿಯಾಗಿ ಪಾಲ್ಗೊಳ್ಳದೇ ವ್ಯತ್ಯಾಸವಾಗಿದೆ. ಪ್ರಾದೇಶಿಕವಾರು ಭಿನ್ನಭಿನ್ನವಾಗಿ ಜಾತಿಯನ್ನು ನಮೂದಿಸಿ ತೊಂದರೆಗೆ ಸಿಲುಕುವಂತಾಗಿದೆ ಎಂದರು.

ನಮ್ಮ ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿರುವ ಒಳ ಮೀಸಲಾತಿಯನ್ನು ತಿರಸ್ಕರಿಸಬೇಕೆಂಬುದು ನಮ್ಮ ಆಗ್ರಹವಾಗಿದೆ. ನಾವು ಕೂಡ ಸ್ವಾಭಿಮಾನಿಗಳು. ನಮ್ಮ ನಾಯಕರುಗಳಿಗೆ ಚಪ್ಪಾಲಿಯಲ್ಲಿ ಹೊಡೆಯುವವರ ಪರವಾಗಿ ನಿಲ್ಲಬೇಕಾದ ಅಗತ್ಯ ನಮಗಿಲ್ಲ ಎಂದು ಹೇಳಿದರು.

ಮಾಜಿ ಗ್ರಾಪಂ ಮಾಜಿ ಅಧ್ಯಕ್ಷ ಬೋಗಾದಿ ನಾಗರಾಜ್ ಮಾತನಾಡಿ, ಮಾದಿಗ ಸಮುದಾಯದವರು ನಮ್ಮನ್ನು ಯುದ್ಧಕ್ಕೆ ಕರೆಯುತ್ತಿದ್ದಾರೆ. ರಕ್ತಪಾತವಾಗುತ್ತದೆ ಎಂದು ಭಾಷಣ ಮಾಡುತ್ತಾರೆ. ನಮ್ಮಿಂದಲೇ ಬಾಷಣ ಮಾಡುವುದನ್ನು ಕಲಿತವರಿಗೆ ಹೇಗೆ ಉತ್ತರ ಕೊಡಬೇಕು ಎಂಬುದು ನಮಗೆ ಗೊತ್ತಿದೆ ಎಂದರು.

ಸಚಿವ ಹೆಚ್.ಸಿ.ಮಹದೇವಪ್ಪ ಅವರ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದವರು ಕೆ.ಎಚ್.ಮುನಿಯಪ್ಪ ಅವರಿಗೆ ಯಾಕೇ ಹೊಡೆಯಲಿಲ್ಲ. ಒಳ ಮೀಸಲಾತಿ ರಾಜಕಾರಣದ ಕುತಂತ್ರ. ಅದನ್ನು ವಿರೋಧಿಸಬೇಕು. ಪ್ರತಿಭಟನೆಯಲ್ಲಿ ಕನಿಷ್ಠ 6 ಲಕ್ಷ ಜನರು ಸೇರಬೇಕು ಎಂದು ಹೇಳಿದರು.

ಸಮಿತಿ ರಚನೆ
ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನಾ ರ‍್ಯಾಲಿ ಯಶಸ್ವಿಯಾಗಬೇಕಾದಲ್ಲಿ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದಲ್ಲಿ ಸಮಿತಿಗಳಾಗಬೇಕು. ಪ್ರತೀ ಗ್ರಾಮದಲ್ಲಿಯೂ ಪಂಚಾಯ್ತಿ ಸೇರಿಸಿ ಸಮಾವೇಶದ ಮಹತ್ವದ ಬಗ್ಗೆ ತಿಳಿಸಬೇಕು ಎಂದು ಮುಖಂಡರು ಸಲಹೆ ನೀಡಿದರು.

ಸಂವಿದಾನ ನೀಡಿರುವ ಹಕ್ಕನ್ನು ಬಳಸಿಕೊಂಡು ಉನ್ನತ ಸ್ಥಾಲದಲ್ಲಿ ಇದ್ದ ಹಾಗೂ ಇರುವ ನಮ್ಮ ಸಮುದಾಯದ ಸಾಕಷ್ಟು ಸ್ಥಿತಿವಂತರಿದ್ದಾರೆ. ಅವರುಗಳು ಮೌನವಾಗಿರಬಾರದು. ಸಮಾವೇಶ ಯಶಸ್ಸಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದು ಕರೆ ನೀಡಿದರು.

ಪ್ರತೀ ತಾಲ್ಲೂಕು ಮಟ್ಟದಿಂದ ಅಂದು ಬಸ್‌ಗಳ ವ್ಯವಸ್ಥೆ ಮಾಡಬೇಕು, ಭಾಗವಹಿಸುವವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಬೇಕು. ಇದಕ್ಕೆ ನಮ್ಮ ಮುಖಂಡರು ಹಾಗೂ ಸ್ವಾಭಿಮಾನಿ ದಲಿತರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ನಂಜುಂಡಸ್ವಾಮಿ, ಅತಿಥಿ ಉಪನ್ಯಾಸಕ ಡಾ. ಪ್ರತಾಪ್, ಬಿಳಿಗೆರೆ ರಾಜಣ್ಣ, ರಮೇಶ್, ಮೂರ್ತಿ, ಭುಗತಹಳ್ಳಿ ಮಣಿಯಯ್ಯ, ಜಿಪಂ ಮಾಜಿ ಸದಸ್ಯ ಚನ್ನಪ್ಪ, ಸೋಮಶೇಖರ್, ಜವರಪ್ಪ, ದಸಂಸ ಸಂಚಾಲಕ ಚೋರನಹಳ್ಳಿ ಶಿವಣ್ಣ, ಬೆಳವಾಡಿ ಶಿವಕುಮಾರ್, ಡಾ.ಎಸ್.ಮೂರ್ತಿ ಕಲ್ಲಹಳ್ಳಿ, ಕಲ್ಲಹಳ್ಳಿ ಕುಮಾರ್ ಮುಂತಾದವರಿದ್ದರು.

 

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

5 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

6 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

7 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

7 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

8 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

10 hours ago