ಮೈಸೂರು ನಗರ

ಸೌಹರ್ದಯುತ, ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸೂಚನೆ

ಮೈಸೂರು : ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣೇಶ ಹಬ್ಬದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡುವುದರಿಂದ ಪರಿಸರಕ್ಕೆ ಮಾರಕವಾಗುವುದನ್ನು ತಪ್ಪಿಸಬಹುದು. ಪಿ.ಒ.ಪಿ ಯಿಂದ ನಿರ್ಮಿಸಿರುವ ಹಾಗೂ ಬಣ್ಣಲೇಪಿತ ಗಣೇಶ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸಿದಾಗ ವಿಷಕಾರಿ ರಾಸಾಯನಿಕಗಳು ಜಲಮೂಲಗಳಾದ ಕೆರೆ, ಬಾವಿ, ಹಳ್ಳ ಸೇರಿ ನೀರು ಕಲುಷಿತಗೊಳ್ಳುತ್ತದೆ. ಇದು ಜಲಚರಗಳಿಗೆ ಹಾಗೂ ಮಾನವನಿಗೆ ಅತ್ಯಂತ ಹಾನಿಕರ ಎಂದು ಹೇಳಿದರು.

ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಅನುಕೂಲವಾಗುವಂತೆ ಸ್ಥಳೀಯ ಸಂಸ್ಥೆಗಳು ಕೆರೆ, ನದಿಪಾತ್ರಗಳಲ್ಲಿ ಸ್ಥಳಗಳನ್ನು ನಿಗದಿಪಡಿಸಬೇಕು. ಪೂಜೆಗೆ ಬಳಸಿದ ಹೂವು ಸೇರಿದಂತೆ ಮತ್ತಿತರ ತ್ಯಾಜ್ಯಗಳ ಶೇಖರಣೆಗೆ ಸಂಗ್ರಹಣಾ ಘಟಕಗಳನ್ನು ಅಳವಡಿಸಬೇಕು ಎಂದು ಸೂಚಿಸಿದರು.

ಸಾರ್ವಜನಿಕವಾಗಿ ಇಡಲಾಗುವ ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಮಹಾನಗರ ಪಾಲಿಕೆ/ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯಿತಿ/ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿಯನ್ನು ಪಡೆದ ನಂತರವೇ ಸ್ಥಾಪಿಸಬೇಕು. ಅನುಮತಿ ನೀಡುವ ಪತ್ರಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ತೋರಣ, ಪ್ಲಾಸ್ಟಿಕ್ ಪ್ಲೆಕ್ಸ್, ಮುಂತಾದ ವಸ್ತುಗಳನ್ನು ಬಳಸದಂತೆ ಷರತ್ತು ವಿಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಫೆಂಡಲ್ ಸಮಿತಿಯವರು ರಾತ್ರಿ 10 ರಿಂದ ಬೆಳಿಗ್ಗೆ 6 ರ ತನಕ ಧ್ವನಿವರ್ಧಕಗಳ ಬಳಕೆ ಮಾಡುವುದನ್ನು ನಿಷೇಧಿಸಿದ್ದು, ಪಾರಂಪರಿಕ ಗೌರಿ-ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗೌರಿ-ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮೈಸೂರು ಮಹಾನಗರ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದೊರಕಿಸಿಕೊಡಲಾಗುವ ಸ್ಥಳೀಯ ವತಿಯಿಂದ ಹೊಂಡ ಅಥವಾ ಸಂಚಾರಿ ವಿಸರ್ಜನಾ ವ್ಯವಸ್ಥೆ (Mobile Immersion Tank) ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು ಎಂದು ತಿಳಿಸಿದರು.

ನೈಸರ್ಗಿಕ/ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಪೂಜಾ ಸಾಮಗ್ರಿಗಳಿಂದ ಉತ್ಪತ್ತಿಯಾಗುವ ಹಸಿಕಸವನ್ನು (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಸ್ಥಳೀಯ ಸಂಸ್ಥೆ ಕಸವಿಲೇವಾರಿ ವ್ಯವಸ್ಥೆಗೆ ನೀಡುವಂತೆ ಹಾಗೂ ನಿರ್ಧಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗೌರಿ ಹಾಗೂ ಗಣೇಶ ಮೂರ್ತಿಯ ವಿಗ್ರಹಗಳನ್ನು ವಿಲೇವಾರಿ ಮಾಡಲು ನಿರ್ಧಿಷ್ಟ ಜಲ ಮೂಲಗಳನ್ನು ನಿಗದಿಪಡಿಸಲಾಗುವುದು ಎಂದರು.

ನಿಯಮಗಳನ್ನು ಉಲ್ಲಂಘಿಸಿ ಪ್ಲಾಸ್ಟರ್ ಆಫ್ ಪ್ಯಾರಿಸ್ /ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಮೂರ್ತಿಗಳನ್ನು ಸಾಗಾಣಿಕೆ, ಮಾರಾಟ, ಪ್ರತಿಷ್ಠಾಪನೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ (ಮೈಸೂರು ನಗರ) ಕುಮಾರ್, ಪರಿಸರ ಅಧಿಕಾರಿ (ಮೈಸೂರು ಗ್ರಾಮಾಂತರ) ವಿ.ಸುನೀಲ್ , ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

28 mins ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

2 hours ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

3 hours ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

3 hours ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

4 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

4 hours ago