ಮೈಸೂರು: ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಿ ಮೈಸೂರು ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ ನಡೆದ ಕೆಡಿಪಿ ಸಭೆಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಶಿಕ್ಷೆಯ ಪ್ರಮಾಣವನ್ನು ಹೆಚ್ಚಳ ಮಾಡಬೇಕು. ಅಪರಾಧ ನಡೆದಾಗ ಕಮಿಷನರ್, ಎಸ್ಪಿ ಸ್ಥಳಕ್ಕೆ ಭೇಟಿ ನೀಡಬೇಕು. ಮೈಸೂರು ಜಿಲ್ಲೆಯಲ್ಲಿ 23 ಪೊಲೀಸ್ ಠಾಣೆಗಳಿವೆ. ಎಲ್ಲಾ ಠಾಣೆಗಳಿಗೂ ಎಸ್ಪಿ ಭೇಟಿ ನೀಡಬೇಕು.
ಇದನ್ನು ಓದಿ: ಮೈಸೂರು: ಡ್ರಗ್ಸ್ ಮುಕ್ತ ಮೈಸೂರು ಮಾಡಲು ಬೈಕ್ ರ್ಯಾಲಿ
ಅಪರಾಧಿ, ರೌಡಿಗಳನ್ನು ಬಿಟ್ಟು ಉಳಿದವರ ಜೊತೆ ಜನಸ್ನೇಹಿಯಾಗಿರಬೇಕು. ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆ ಅಪರಾಧ ಆಗುವಂತೆ ನೋಡಿಕೊಳ್ಳಬೇಕು. ಕೊಲೆ, ಡಕಾಯಿತಿ, ಸರಗಳ್ಳತನ ಸೇರಿದಂತೆ ಅಪರಾಧ ಕೃತ್ಯ ಕಡಿಮೆ ಆಗಬೇಕು. ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಿ. ವಿದ್ಯಾರ್ಥಿಗಳು, ಯುವಕರು ಡ್ರಗ್ಸ್ ಚಟಕ್ಕೆ ಸಿಲುಕಿದ್ದಾರೆ. ಅವರ ಭವಿಷ್ಯದ ದೃಷ್ಟಿಯಿಂದ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.
ಇನ್ನು ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ. ಇನ್ನು ಮುಂದೆ ಇಂತಹ ಘಟನೆಗಳು ನಡೆದರೆ ಕಮಿಷನರ್ ನೇರ ಕಾರಣ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…