ಮೈಸೂರು: ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಿ ಮೈಸೂರು ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ ನಡೆದ ಕೆಡಿಪಿ ಸಭೆಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಶಿಕ್ಷೆಯ ಪ್ರಮಾಣವನ್ನು ಹೆಚ್ಚಳ ಮಾಡಬೇಕು. ಅಪರಾಧ ನಡೆದಾಗ ಕಮಿಷನರ್, ಎಸ್ಪಿ ಸ್ಥಳಕ್ಕೆ ಭೇಟಿ ನೀಡಬೇಕು. ಮೈಸೂರು ಜಿಲ್ಲೆಯಲ್ಲಿ 23 ಪೊಲೀಸ್ ಠಾಣೆಗಳಿವೆ. ಎಲ್ಲಾ ಠಾಣೆಗಳಿಗೂ ಎಸ್ಪಿ ಭೇಟಿ ನೀಡಬೇಕು.
ಇದನ್ನು ಓದಿ: ಮೈಸೂರು: ಡ್ರಗ್ಸ್ ಮುಕ್ತ ಮೈಸೂರು ಮಾಡಲು ಬೈಕ್ ರ್ಯಾಲಿ
ಅಪರಾಧಿ, ರೌಡಿಗಳನ್ನು ಬಿಟ್ಟು ಉಳಿದವರ ಜೊತೆ ಜನಸ್ನೇಹಿಯಾಗಿರಬೇಕು. ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆ ಅಪರಾಧ ಆಗುವಂತೆ ನೋಡಿಕೊಳ್ಳಬೇಕು. ಕೊಲೆ, ಡಕಾಯಿತಿ, ಸರಗಳ್ಳತನ ಸೇರಿದಂತೆ ಅಪರಾಧ ಕೃತ್ಯ ಕಡಿಮೆ ಆಗಬೇಕು. ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಿ. ವಿದ್ಯಾರ್ಥಿಗಳು, ಯುವಕರು ಡ್ರಗ್ಸ್ ಚಟಕ್ಕೆ ಸಿಲುಕಿದ್ದಾರೆ. ಅವರ ಭವಿಷ್ಯದ ದೃಷ್ಟಿಯಿಂದ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.
ಇನ್ನು ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ. ಇನ್ನು ಮುಂದೆ ಇಂತಹ ಘಟನೆಗಳು ನಡೆದರೆ ಕಮಿಷನರ್ ನೇರ ಕಾರಣ ಎಂದು ಎಚ್ಚರಿಕೆ ನೀಡಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…