ಮೈಸೂರು ನಗರ

ಅಂಬೇಡ್ಕರ್‌ಗೆ ಅಪಮಾನ : ನಾಳೆ ಮೈಸೂರಲ್ಲಿ ಬೃಹತ್‌ ಪ್ರತಿಭಟನೆ

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಏ.29ರಂದು ಬೆಳಿಗ್ಗೆ 10 ಗಂಟೆಗೆ ವಾಜಮಂಗಲ ಗ್ರಾಮದಿಂದ ಸಿದ್ದಾರ್ಥನಗರದ ಬುದ್ಧ ಪ್ರತಿಮೆವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮಹಾಪೌರ ಎಂ.ಪುರುಷೋತ್ತಮ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನಾ ಮೆರವಣಿಗೆಗೆ ಎಲ್ಲ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಸಂಪೂರ್ಣ ಬೆಂಬಲ ಸೂಚಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಭೀಮ ಬಂಧುಗಳು ಪಾಲ್ಗೊಳ್ಳಲಿದ್ದಾರೆ. ಸಿದ್ದಾರ್ಥನಗರದ ಬುದ್ಧ ಪ್ರತಿಮೆ ಬಳಿ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿ, ಮುಖ್ಯಮಂತ್ರಿ, ರಾಜ್ಯಪಾಲ ಹಾಗೂ ಗೃಹಸಚಿವರಿಗೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ, ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆ ವಿಽಸಬೇಕು ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅಂಬೇಡ್ಕರ್ ಅವರನ್ನು ಅಪಮಾನಿಸಿ ಗೆದ್ದುಕೊಳ್ಳಬಹುದು ಎಂದುಕೊಳ್ಳಬೇಡಿ. ಅಂಬೇಡ್ಕರ್ ಅನುಯಾ ಯಿಗಳು ಎಂದಿಗೂ ಮೈಮರೆತು ಕುಳಿತುಕೊಳ್ಳುವುದಿಲ್ಲ. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಕಿಡಿಗೇಡಿಗಳಿಗೆ ಕಾನೂನು ರೀತಿಯಲ್ಲಿ ತಕ್ಕ ಪಾಠ ಕಲಿಸದೆ ವಿರಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಅಂಬೇಡ್ಕರ್ ಅವರ ಹೆಸರಿನಲ್ಲಿ ನಾಲ್ಕು ತಲೆಮಾರುಗಳು ಕುಳಿತು ತಿಂದು ಉಂಡರೂ ಮುಗಿಯದಷ್ಟು ಆಸ್ತಿ ಸಂಪಾದಿಸಿರುವ ರಾಜಕೀಯ ಮುಖಂಡರು ಅಂಬೇಡ್ಕರ್ ಅವರ ಪ್ರತಿಮೆಗಳ ಮೇಲೆ ಕಿಡಿಗೇಡಿಗಳು ದಾಳಿ ನಡೆಸುತ್ತಿದ್ದರೂ ಪ್ರತಿಭಟನೆ ನಡೆಸದಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಣಿಯಯ್ಯ, ವಾಜಮಂಗಲ ಗ್ರಾಮ ಪಂಚಾಯಿತಿ ಸದಸ್ಯ ಕೆ.ಶಿವು, ವಾಜಮಂಗಲ ಗ್ರಾಮದ ಮುಖಂಡರಾದ ಚಿನ್ನಸ್ವಾಮಿ, ಸುರೇಶ್, ಮಂಜು, ಸಿದ್ದಪ್ಪ, ಸಣ್ಣಪ್ಪ, ಮಹದೇವಸ್ವಾಮಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

20 mins ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

1 hour ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

1 hour ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

1 hour ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

5 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

6 hours ago