ಮೈಸೂರು ನಗರ

ಎಸ್.ಎಂ.ಕೃಷ್ಣ ಅವರ ಕಾಲದಿಂದಲೂ ಒಳಮೀಸಲಾತಿ ಕೂಗು ಕೇಳಿ ಬಂದಿದೆ: ಉಪಸಭಾಪತಿ ರುದ್ರಪ್ಪ ಲಮಾಣಿ

ಮೈಸೂರು: ಎಸ್.ಎಂ.ಕೃಷ್ಣ ಅವರ ಕಾಲದಿಂದಲೂ ಒಳಮೀಸಲಾತಿ ಕೂಗು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಈಗ ಪರಿಶಿಷ್ಟ ಜಾತಿ ಸಮೀಕ್ಷೆ ಪ್ರತ್ಯೇಕವಾಗಿ ನಡೆಯುತ್ತಿದೆ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗಾಗಿ ಹಲವಾರು ವರ್ಷಗಳಿಂದ ಗೊಂದಲಗಳಿದ್ದವು. ಎಸ್.ಎಂ.ಕೃಷ್ಣ ಅವರ ಕಾಲದಿಂದಲೂ ಒಳ ಮೀಸಲಾತಿ ಕೂಗು ಕೇಳಿ ಬಂದಿದೆ. ಈ ಹಿಂದೆ ನಾನು ಸಚಿವನಿದ್ದಾಗ ಆಂಜನೇಯ ಅವರು ಸಮಾಜ ಕಲ್ಯಾಣ ಸಚಿವರಿದ್ದಾಗಲೂ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿದ್ದೆವು. ಆ ಕಾಲ ಸನಿಹವಾಗಿದ್ದು, ಈಗ ಪರಿಶಿಷ್ಟ ಜಾತಿ ಸಮೀಕ್ಷೆ ಪ್ರತ್ಯೇಕವಾಗಿ ನಡೆಯುತ್ತಿದೆ.

ಈಗ ಪ್ರತ್ಯೇಕ ಆಯೋಗ ರಚನೆ ಮಾಡಿ ವೈಜ್ಞಾನಿಕ ದತ್ತಾಂಶ ಸಂಗ್ರಹ ಮಾಡಲು ಶಿಕ್ಷಕರನ್ನು ನೇಮಕ ಮಾಡಿ ಗಣತಿ ನಡೆಯುತ್ತಿದೆ. ಸಣ್ಣ ಪುಟ್ಟ ಗೊಂದಲಗಳನ್ನು ಆಂತರಿಕವಾಗಿ ಬಗೆಹರಿಸಿಕೊಳ್ಳಬೇಕಿದೆ. ಹಿಂದಿನಿಂದಲೂ ಎಡಗೈ ಬಲಗೈ ನಡುವೆ ನಾವು ಇದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಅವಕಾಶ ಸಿಗಲಿ. ಒಂದು ರಾಶಿ ಅಂದ ಮೇಲೆ ಒಂದಷ್ಟು ಆಚೆ ಈಚೆ ಆಗುತ್ತೆ. ಒಟ್ಟಿನಲ್ಲಿ ತಳ ಸಮುದಾಯದ ಜನರಿಗೆ ಒಳ್ಳೆಯದಾದರೆ ಸರಿ. ಈಗ ಎಲ್ಲ ಚೆನ್ನಾಗಿ ನಡೆಯುತ್ತಿದೆ ಎಂದು ಒಳಮೀಸಲಾತಿ ಬಗ್ಗೆ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

3 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

7 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

24 hours ago