ಮೈಸೂರು: ಎಸ್.ಎಂ.ಕೃಷ್ಣ ಅವರ ಕಾಲದಿಂದಲೂ ಒಳಮೀಸಲಾತಿ ಕೂಗು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಈಗ ಪರಿಶಿಷ್ಟ ಜಾತಿ ಸಮೀಕ್ಷೆ ಪ್ರತ್ಯೇಕವಾಗಿ ನಡೆಯುತ್ತಿದೆ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗಾಗಿ ಹಲವಾರು ವರ್ಷಗಳಿಂದ ಗೊಂದಲಗಳಿದ್ದವು. ಎಸ್.ಎಂ.ಕೃಷ್ಣ ಅವರ ಕಾಲದಿಂದಲೂ ಒಳ ಮೀಸಲಾತಿ ಕೂಗು ಕೇಳಿ ಬಂದಿದೆ. ಈ ಹಿಂದೆ ನಾನು ಸಚಿವನಿದ್ದಾಗ ಆಂಜನೇಯ ಅವರು ಸಮಾಜ ಕಲ್ಯಾಣ ಸಚಿವರಿದ್ದಾಗಲೂ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿದ್ದೆವು. ಆ ಕಾಲ ಸನಿಹವಾಗಿದ್ದು, ಈಗ ಪರಿಶಿಷ್ಟ ಜಾತಿ ಸಮೀಕ್ಷೆ ಪ್ರತ್ಯೇಕವಾಗಿ ನಡೆಯುತ್ತಿದೆ.
ಈಗ ಪ್ರತ್ಯೇಕ ಆಯೋಗ ರಚನೆ ಮಾಡಿ ವೈಜ್ಞಾನಿಕ ದತ್ತಾಂಶ ಸಂಗ್ರಹ ಮಾಡಲು ಶಿಕ್ಷಕರನ್ನು ನೇಮಕ ಮಾಡಿ ಗಣತಿ ನಡೆಯುತ್ತಿದೆ. ಸಣ್ಣ ಪುಟ್ಟ ಗೊಂದಲಗಳನ್ನು ಆಂತರಿಕವಾಗಿ ಬಗೆಹರಿಸಿಕೊಳ್ಳಬೇಕಿದೆ. ಹಿಂದಿನಿಂದಲೂ ಎಡಗೈ ಬಲಗೈ ನಡುವೆ ನಾವು ಇದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಅವಕಾಶ ಸಿಗಲಿ. ಒಂದು ರಾಶಿ ಅಂದ ಮೇಲೆ ಒಂದಷ್ಟು ಆಚೆ ಈಚೆ ಆಗುತ್ತೆ. ಒಟ್ಟಿನಲ್ಲಿ ತಳ ಸಮುದಾಯದ ಜನರಿಗೆ ಒಳ್ಳೆಯದಾದರೆ ಸರಿ. ಈಗ ಎಲ್ಲ ಚೆನ್ನಾಗಿ ನಡೆಯುತ್ತಿದೆ ಎಂದು ಒಳಮೀಸಲಾತಿ ಬಗ್ಗೆ ಮಾಹಿತಿ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…