ಮೈಸೂರು: ಎಸ್.ಎಂ.ಕೃಷ್ಣ ಅವರ ಕಾಲದಿಂದಲೂ ಒಳಮೀಸಲಾತಿ ಕೂಗು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಈಗ ಪರಿಶಿಷ್ಟ ಜಾತಿ ಸಮೀಕ್ಷೆ ಪ್ರತ್ಯೇಕವಾಗಿ ನಡೆಯುತ್ತಿದೆ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗಾಗಿ ಹಲವಾರು ವರ್ಷಗಳಿಂದ ಗೊಂದಲಗಳಿದ್ದವು. ಎಸ್.ಎಂ.ಕೃಷ್ಣ ಅವರ ಕಾಲದಿಂದಲೂ ಒಳ ಮೀಸಲಾತಿ ಕೂಗು ಕೇಳಿ ಬಂದಿದೆ. ಈ ಹಿಂದೆ ನಾನು ಸಚಿವನಿದ್ದಾಗ ಆಂಜನೇಯ ಅವರು ಸಮಾಜ ಕಲ್ಯಾಣ ಸಚಿವರಿದ್ದಾಗಲೂ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿದ್ದೆವು. ಆ ಕಾಲ ಸನಿಹವಾಗಿದ್ದು, ಈಗ ಪರಿಶಿಷ್ಟ ಜಾತಿ ಸಮೀಕ್ಷೆ ಪ್ರತ್ಯೇಕವಾಗಿ ನಡೆಯುತ್ತಿದೆ.
ಈಗ ಪ್ರತ್ಯೇಕ ಆಯೋಗ ರಚನೆ ಮಾಡಿ ವೈಜ್ಞಾನಿಕ ದತ್ತಾಂಶ ಸಂಗ್ರಹ ಮಾಡಲು ಶಿಕ್ಷಕರನ್ನು ನೇಮಕ ಮಾಡಿ ಗಣತಿ ನಡೆಯುತ್ತಿದೆ. ಸಣ್ಣ ಪುಟ್ಟ ಗೊಂದಲಗಳನ್ನು ಆಂತರಿಕವಾಗಿ ಬಗೆಹರಿಸಿಕೊಳ್ಳಬೇಕಿದೆ. ಹಿಂದಿನಿಂದಲೂ ಎಡಗೈ ಬಲಗೈ ನಡುವೆ ನಾವು ಇದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಅವಕಾಶ ಸಿಗಲಿ. ಒಂದು ರಾಶಿ ಅಂದ ಮೇಲೆ ಒಂದಷ್ಟು ಆಚೆ ಈಚೆ ಆಗುತ್ತೆ. ಒಟ್ಟಿನಲ್ಲಿ ತಳ ಸಮುದಾಯದ ಜನರಿಗೆ ಒಳ್ಳೆಯದಾದರೆ ಸರಿ. ಈಗ ಎಲ್ಲ ಚೆನ್ನಾಗಿ ನಡೆಯುತ್ತಿದೆ ಎಂದು ಒಳಮೀಸಲಾತಿ ಬಗ್ಗೆ ಮಾಹಿತಿ ನೀಡಿದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…