ಮೈಸೂರು ನಗರ

ಇರಾನ್-ಇಸ್ರೇಲ್‌ ಸಂಘರ್ಷ: ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದ ಸಚಿವ ಎಚ್‌ಸಿಎಂ

ಮೈಸೂರು: ಇರಾನ್-ಇಸ್ರೇಲ್‌ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ತೆಗೆದುಕೊಳ್ಳುತ್ತಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಮಾತನಾಡಿ ಕ್ರಮವಹಿಸಿದ್ದಾರೆ. ಈ ಘಟನೆಯಲ್ಲಿ ಮೈಸೂರಿನವರು ಇರುವ ಮಾಹಿತಿ ಇಲ್ಲಿಯವರೆಗೂ ಸಿಕ್ಕಿಲ್ಲ ಎಂದು ಹೇಳಿದರು.

ಇನ್ನು ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸೈಲೆಂಟ್‌ ಆದ ಅವರು, ನಾನು ಯಾರ ಬಗ್ಗೆಯೂ ಯಾವುದರ ಬಗ್ಗೆಯೂ ಮಾತನಾಡುವುದಿಲ್ಲ. ಯಾರು ನನ್ನ ಬಗ್ಗೆ ಏನೇ ಹೇಳಿಕೆ ನೀಡಿದರು ಅದರ ಬಗ್ಗೆ ಉತ್ತರ ಕೊಡುವುದಿಲ್ಲ. ಪಕ್ಷದ ವಿಚಾರವನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬೇರೆ ವಿಚಾರಗಳು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಇನ್ನು ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರವು ಕಾನೂನು ಮುಖಾಂತರವೇ ಎಲ್ಲವು ಸಾಗುತ್ತಿದೆ. ಕೆಲವರು ಪರ- ವಿರೋಧದ ಬಗ್ಗೆ ಮಾತನಾಡುತ್ತಿದ್ದಾರೆ. ಯಾರು ಮಾತನಾಡುತ್ತಾರೋ ಮಾತನಾಡಲಿ ಬಿಡಿ. ಇದು ಪ್ರಜಾಪ್ರಭುತ್ವ, ಎಲ್ಲರಿಗೂ ಮಾತನಾಡುವ ಅವಕಾಶವಿದೆ. ಆದರೆ ಎಲ್ಲವು ಸಂವಿಧಾನದ ಅಡಿಯಲ್ಲಿ ನಡೆಯುತ್ತಿದೆ. ಇದರಲ್ಲಿ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಚರ್ಚೆಯಾದದ್ದನ್ನು ಬಹಿರಂಗಪಡಿಸಬೇಕು ಎಂಬುದೇನೂ ಇಲ್ಲ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

16 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

17 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago