ಮೈಸೂರು ನಗರ

ಬೆಂಕಿ ಹಚ್ಚಿ ಅದರಲ್ಲಿ ತಾನು ಸುಟ್ಟು ಹೋಗುವುದು ಸರಿಯಲ್ಲ: ಪ್ರತಾಪ್‌ ಸಿಂಹ ವಿರುದ್ಧ ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಲೇಖಕಿ ಬಾನು ಮುಷ್ತಾಕ್ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಗೆ ಶಾಸಕ ತನ್ವೀರ್‌ ಸೇಠ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಳ್ಮೆ ಇರಲಿ ಬೆಂಕಿ ಹಚ್ಚಿ ತಾನು ಸುಟ್ಟುಹೋಗುವುದು ಸರಿಯಲ್ಲ. ಈ ರೀತಿ ಹೇಳಿಕೆ ಕೊಡುವವರಿಗೆ ತಾಳ್ಮೆ ಇರಬೇಕು. ಭವಿಷ್ಯದಲ್ಲಿ ಒಳ್ಳೆಯದಾಗಬೇಕಾದರೆ ಬೆಂಕಿ ಹಚ್ಚಿ, ಕಾವಿನಲ್ಲಿ ಸುಟ್ಟು ಹೋಗುವುದು ಸರಿಯಲ್ಲ. ಇತಿಹಾಸ ನಮ್ಮ ಮುಂದೆ ಇದೆ. ಎಸ್.ಎಂ.ಕೃಷ್ಣ, ನಿಸಾರ್ ಅಹಮದ್, ರಾಷ್ಟ್ರಪತಿಗಳು, ಸಾಮಾನ್ಯ ರೈತ ಕೂಡ ದಸರಾ ಉದ್ಘಾಟನೆ ಮಾಡಿದ್ದಾರೆ. ಈಗ ದಸರಾದ ಸಂಪೂರ್ಣ ಹೊಣೆಗಾರಿಕೆಯನ್ನು ಸರ್ಕಾರ ನಡೆಸಿಕೊಂಡು ಬರುತ್ತಿದೆ. ವ್ಯಕ್ತಿಯ ಗೌರವ ನೋಡಿ ಆಹ್ವಾನ ಕೊಡಲಾಗಿದೆ. ಸಾಹಿತ್ಯ ಲೋಕದಲ್ಲಿ ಗುರುತಿಸಿ ಬಾನು ಮುಷ್ತಾಕ್‌ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ನನ್ನಲ್ಲಿರುವ ಭಕ್ತಿ ಯಾರಿಗೂ ತೋರಿಸುವುದಲ್ಲ. ನನ್ನ ನಡತೆಯಷ್ಟೇ ಮುಖ್ಯ. ನಾನು ಮಾಡುವ ಕೆಲಸ ನನಗೆ ತೃಪ್ತಿ ತರಬೇಕು. ಹೇಗಾದರೂ ಮುಂದೆ ಬರಬೇಕು ಎಂದು ಕೆಲವರು ಇಂತಹ ವಿಚಾರ ವಿಚಾರಗಳನ್ನು ಮುನ್ನಲೆಗೆ ತರುತ್ತಾರೆ. ಇದು ಪ್ರಜ್ಞಾವಂತರಿಗೆ ಶೋಭೆ ತರುವುದಿಲ್ಲ. ನಾವೆಲ್ಲರೂ ಸರ್ವಧರ್ಮದ ವ್ಯವಸ್ಥೆಯಲ್ಲಿ ಹೋಗಬೇಕಿದೆ ಎಂದು ಹೇಳಿದರು.

ಇನ್ನು ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆರ್‌ಎಸ್‌ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬೇರೆ ರಾಜಕೀಯ ಪಕ್ಷದ ಸಿದ್ಧಾಂತ ಅರ್ಥ ಮಾಡಿಕೊಂಡರೆ ಅದರಲ್ಲಿ ತಪ್ಪೇನಿದೆ? ಡಿಸಿಎಂ ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದರೆ ಅದರ ಅರ್ಥ ಅವರು ಬಿಜೆಪಿ ಪರ ಎಂದಲ್ಲ. ಯಾರು ಕೂಡ ತಮ್ಮ ಪಕ್ಷದ ಸಿದ್ಧಾಂತವನ್ನು ಬಲಿ ಕೊಡಲ್ಲ. ಡಿಸಿಎಂ ಬಗ್ಗೆ ರಾಜಣ್ಣ ಮಾಡಿರುವ ಟೀಕೆಯು ಸರಿ ಇಲ್ಲ. ರಾಜಣ್ಣ ಮಾತನಾಡಿರುವುದನ್ನು ನಾನು ಒಪ್ಪುವುದಿಲ್ಲ. ರಾಜಣ್ಣ ಈ ರೀತಿ ಮಾತಾಡಿ ಮಾತಾಡಿ ತಮಗೆ ತಾವೇ
ನಷ್ಟ ಅನುಭವಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ರಾಜಕೀಯ ಯಾರು ಮಾಡಬಾರದು. ತನಿಖೆ ಮಾಡಿದ್ದೆ ಸರಿ ತಪ್ಪು ಎನ್ನುವ ಚರ್ಚೆ ಸರಿಯಲ್ಲ.
ಮುಸುಕುಧಾರಿಯ ಮಂಪರು ಪರೀಕ್ಷೆಯನ್ನು ಅಗತ್ಯವಾಗಿ ಮಾಡಬೇಕು. ದೊಡ್ಡ ಧಾರ್ಮಿಕ ಸಂಸ್ಥೆ ಮೇಲೆ ಆರೋಪ ಮಾಡಿ ಯಾರು ದೊಡ್ಡವರಾಗಲ್ಲ. ಈ ಪ್ರಕರಣದ ಹಿಂದೆ ಯಾರದ್ದೋ ಕೈವಾಡವಿದೆ. ಸಮಾಜಘಾತುಕ ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಸಮಾಜಘಾತುಕ ಕೆಲಸ ಮಾಡುವವರಿಗೆ ಜಾತಿ, ಧರ್ಮ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

27 mins ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

2 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

6 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

7 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

13 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

13 hours ago