ಮೈಸೂರು ನಗರ

ಬೆಂಕಿ ಹಚ್ಚಿ ಅದರಲ್ಲಿ ತಾನು ಸುಟ್ಟು ಹೋಗುವುದು ಸರಿಯಲ್ಲ: ಪ್ರತಾಪ್‌ ಸಿಂಹ ವಿರುದ್ಧ ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಲೇಖಕಿ ಬಾನು ಮುಷ್ತಾಕ್ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಗೆ ಶಾಸಕ ತನ್ವೀರ್‌ ಸೇಠ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಳ್ಮೆ ಇರಲಿ ಬೆಂಕಿ ಹಚ್ಚಿ ತಾನು ಸುಟ್ಟುಹೋಗುವುದು ಸರಿಯಲ್ಲ. ಈ ರೀತಿ ಹೇಳಿಕೆ ಕೊಡುವವರಿಗೆ ತಾಳ್ಮೆ ಇರಬೇಕು. ಭವಿಷ್ಯದಲ್ಲಿ ಒಳ್ಳೆಯದಾಗಬೇಕಾದರೆ ಬೆಂಕಿ ಹಚ್ಚಿ, ಕಾವಿನಲ್ಲಿ ಸುಟ್ಟು ಹೋಗುವುದು ಸರಿಯಲ್ಲ. ಇತಿಹಾಸ ನಮ್ಮ ಮುಂದೆ ಇದೆ. ಎಸ್.ಎಂ.ಕೃಷ್ಣ, ನಿಸಾರ್ ಅಹಮದ್, ರಾಷ್ಟ್ರಪತಿಗಳು, ಸಾಮಾನ್ಯ ರೈತ ಕೂಡ ದಸರಾ ಉದ್ಘಾಟನೆ ಮಾಡಿದ್ದಾರೆ. ಈಗ ದಸರಾದ ಸಂಪೂರ್ಣ ಹೊಣೆಗಾರಿಕೆಯನ್ನು ಸರ್ಕಾರ ನಡೆಸಿಕೊಂಡು ಬರುತ್ತಿದೆ. ವ್ಯಕ್ತಿಯ ಗೌರವ ನೋಡಿ ಆಹ್ವಾನ ಕೊಡಲಾಗಿದೆ. ಸಾಹಿತ್ಯ ಲೋಕದಲ್ಲಿ ಗುರುತಿಸಿ ಬಾನು ಮುಷ್ತಾಕ್‌ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ನನ್ನಲ್ಲಿರುವ ಭಕ್ತಿ ಯಾರಿಗೂ ತೋರಿಸುವುದಲ್ಲ. ನನ್ನ ನಡತೆಯಷ್ಟೇ ಮುಖ್ಯ. ನಾನು ಮಾಡುವ ಕೆಲಸ ನನಗೆ ತೃಪ್ತಿ ತರಬೇಕು. ಹೇಗಾದರೂ ಮುಂದೆ ಬರಬೇಕು ಎಂದು ಕೆಲವರು ಇಂತಹ ವಿಚಾರ ವಿಚಾರಗಳನ್ನು ಮುನ್ನಲೆಗೆ ತರುತ್ತಾರೆ. ಇದು ಪ್ರಜ್ಞಾವಂತರಿಗೆ ಶೋಭೆ ತರುವುದಿಲ್ಲ. ನಾವೆಲ್ಲರೂ ಸರ್ವಧರ್ಮದ ವ್ಯವಸ್ಥೆಯಲ್ಲಿ ಹೋಗಬೇಕಿದೆ ಎಂದು ಹೇಳಿದರು.

ಇನ್ನು ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆರ್‌ಎಸ್‌ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬೇರೆ ರಾಜಕೀಯ ಪಕ್ಷದ ಸಿದ್ಧಾಂತ ಅರ್ಥ ಮಾಡಿಕೊಂಡರೆ ಅದರಲ್ಲಿ ತಪ್ಪೇನಿದೆ? ಡಿಸಿಎಂ ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದರೆ ಅದರ ಅರ್ಥ ಅವರು ಬಿಜೆಪಿ ಪರ ಎಂದಲ್ಲ. ಯಾರು ಕೂಡ ತಮ್ಮ ಪಕ್ಷದ ಸಿದ್ಧಾಂತವನ್ನು ಬಲಿ ಕೊಡಲ್ಲ. ಡಿಸಿಎಂ ಬಗ್ಗೆ ರಾಜಣ್ಣ ಮಾಡಿರುವ ಟೀಕೆಯು ಸರಿ ಇಲ್ಲ. ರಾಜಣ್ಣ ಮಾತನಾಡಿರುವುದನ್ನು ನಾನು ಒಪ್ಪುವುದಿಲ್ಲ. ರಾಜಣ್ಣ ಈ ರೀತಿ ಮಾತಾಡಿ ಮಾತಾಡಿ ತಮಗೆ ತಾವೇ
ನಷ್ಟ ಅನುಭವಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ರಾಜಕೀಯ ಯಾರು ಮಾಡಬಾರದು. ತನಿಖೆ ಮಾಡಿದ್ದೆ ಸರಿ ತಪ್ಪು ಎನ್ನುವ ಚರ್ಚೆ ಸರಿಯಲ್ಲ.
ಮುಸುಕುಧಾರಿಯ ಮಂಪರು ಪರೀಕ್ಷೆಯನ್ನು ಅಗತ್ಯವಾಗಿ ಮಾಡಬೇಕು. ದೊಡ್ಡ ಧಾರ್ಮಿಕ ಸಂಸ್ಥೆ ಮೇಲೆ ಆರೋಪ ಮಾಡಿ ಯಾರು ದೊಡ್ಡವರಾಗಲ್ಲ. ಈ ಪ್ರಕರಣದ ಹಿಂದೆ ಯಾರದ್ದೋ ಕೈವಾಡವಿದೆ. ಸಮಾಜಘಾತುಕ ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಸಮಾಜಘಾತುಕ ಕೆಲಸ ಮಾಡುವವರಿಗೆ ಜಾತಿ, ಧರ್ಮ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago