ಮೈಸೂರು ನಗರ

ಬೆಂಕಿ ಹಚ್ಚಿ ಅದರಲ್ಲಿ ತಾನು ಸುಟ್ಟು ಹೋಗುವುದು ಸರಿಯಲ್ಲ: ಪ್ರತಾಪ್‌ ಸಿಂಹ ವಿರುದ್ಧ ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಲೇಖಕಿ ಬಾನು ಮುಷ್ತಾಕ್ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಗೆ ಶಾಸಕ ತನ್ವೀರ್‌ ಸೇಠ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಳ್ಮೆ ಇರಲಿ ಬೆಂಕಿ ಹಚ್ಚಿ ತಾನು ಸುಟ್ಟುಹೋಗುವುದು ಸರಿಯಲ್ಲ. ಈ ರೀತಿ ಹೇಳಿಕೆ ಕೊಡುವವರಿಗೆ ತಾಳ್ಮೆ ಇರಬೇಕು. ಭವಿಷ್ಯದಲ್ಲಿ ಒಳ್ಳೆಯದಾಗಬೇಕಾದರೆ ಬೆಂಕಿ ಹಚ್ಚಿ, ಕಾವಿನಲ್ಲಿ ಸುಟ್ಟು ಹೋಗುವುದು ಸರಿಯಲ್ಲ. ಇತಿಹಾಸ ನಮ್ಮ ಮುಂದೆ ಇದೆ. ಎಸ್.ಎಂ.ಕೃಷ್ಣ, ನಿಸಾರ್ ಅಹಮದ್, ರಾಷ್ಟ್ರಪತಿಗಳು, ಸಾಮಾನ್ಯ ರೈತ ಕೂಡ ದಸರಾ ಉದ್ಘಾಟನೆ ಮಾಡಿದ್ದಾರೆ. ಈಗ ದಸರಾದ ಸಂಪೂರ್ಣ ಹೊಣೆಗಾರಿಕೆಯನ್ನು ಸರ್ಕಾರ ನಡೆಸಿಕೊಂಡು ಬರುತ್ತಿದೆ. ವ್ಯಕ್ತಿಯ ಗೌರವ ನೋಡಿ ಆಹ್ವಾನ ಕೊಡಲಾಗಿದೆ. ಸಾಹಿತ್ಯ ಲೋಕದಲ್ಲಿ ಗುರುತಿಸಿ ಬಾನು ಮುಷ್ತಾಕ್‌ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ನನ್ನಲ್ಲಿರುವ ಭಕ್ತಿ ಯಾರಿಗೂ ತೋರಿಸುವುದಲ್ಲ. ನನ್ನ ನಡತೆಯಷ್ಟೇ ಮುಖ್ಯ. ನಾನು ಮಾಡುವ ಕೆಲಸ ನನಗೆ ತೃಪ್ತಿ ತರಬೇಕು. ಹೇಗಾದರೂ ಮುಂದೆ ಬರಬೇಕು ಎಂದು ಕೆಲವರು ಇಂತಹ ವಿಚಾರ ವಿಚಾರಗಳನ್ನು ಮುನ್ನಲೆಗೆ ತರುತ್ತಾರೆ. ಇದು ಪ್ರಜ್ಞಾವಂತರಿಗೆ ಶೋಭೆ ತರುವುದಿಲ್ಲ. ನಾವೆಲ್ಲರೂ ಸರ್ವಧರ್ಮದ ವ್ಯವಸ್ಥೆಯಲ್ಲಿ ಹೋಗಬೇಕಿದೆ ಎಂದು ಹೇಳಿದರು.

ಇನ್ನು ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆರ್‌ಎಸ್‌ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬೇರೆ ರಾಜಕೀಯ ಪಕ್ಷದ ಸಿದ್ಧಾಂತ ಅರ್ಥ ಮಾಡಿಕೊಂಡರೆ ಅದರಲ್ಲಿ ತಪ್ಪೇನಿದೆ? ಡಿಸಿಎಂ ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದರೆ ಅದರ ಅರ್ಥ ಅವರು ಬಿಜೆಪಿ ಪರ ಎಂದಲ್ಲ. ಯಾರು ಕೂಡ ತಮ್ಮ ಪಕ್ಷದ ಸಿದ್ಧಾಂತವನ್ನು ಬಲಿ ಕೊಡಲ್ಲ. ಡಿಸಿಎಂ ಬಗ್ಗೆ ರಾಜಣ್ಣ ಮಾಡಿರುವ ಟೀಕೆಯು ಸರಿ ಇಲ್ಲ. ರಾಜಣ್ಣ ಮಾತನಾಡಿರುವುದನ್ನು ನಾನು ಒಪ್ಪುವುದಿಲ್ಲ. ರಾಜಣ್ಣ ಈ ರೀತಿ ಮಾತಾಡಿ ಮಾತಾಡಿ ತಮಗೆ ತಾವೇ
ನಷ್ಟ ಅನುಭವಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ರಾಜಕೀಯ ಯಾರು ಮಾಡಬಾರದು. ತನಿಖೆ ಮಾಡಿದ್ದೆ ಸರಿ ತಪ್ಪು ಎನ್ನುವ ಚರ್ಚೆ ಸರಿಯಲ್ಲ.
ಮುಸುಕುಧಾರಿಯ ಮಂಪರು ಪರೀಕ್ಷೆಯನ್ನು ಅಗತ್ಯವಾಗಿ ಮಾಡಬೇಕು. ದೊಡ್ಡ ಧಾರ್ಮಿಕ ಸಂಸ್ಥೆ ಮೇಲೆ ಆರೋಪ ಮಾಡಿ ಯಾರು ದೊಡ್ಡವರಾಗಲ್ಲ. ಈ ಪ್ರಕರಣದ ಹಿಂದೆ ಯಾರದ್ದೋ ಕೈವಾಡವಿದೆ. ಸಮಾಜಘಾತುಕ ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಸಮಾಜಘಾತುಕ ಕೆಲಸ ಮಾಡುವವರಿಗೆ ಜಾತಿ, ಧರ್ಮ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago