ಮೈಸೂರು ನಗರ

ಸಣ್ಣ ವ್ಯಾಪಾರಿಗಳಿಗೆ GST ಹಾಕಿರೋದು ಕೇಂದ್ರ ಸರ್ಕಾರ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿ

ಮೈಸೂರು: ಕಮರ್ಷಿಯಲ್ ಟ್ಯಾಕ್ಸ್ ವಿಚಾರದಲ್ಲಿ ಜನರಿಗೆ ಸತ್ಯಾ-ಸತ್ಯತೆ ತಿಳಿಸಲು ಮುಂದಾಗಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, GST ಕಚೇರಿಗೆ ಬಂದಿದ್ದೇವೆ. ಕಳೆದ ಒಂದು ವಾರದಿಂದ ಸಣ್ಣ ವ್ಯಾಪಾರಸ್ಥರಿಗೆ ಕಮರ್ಷಿಯಲ್ ಟ್ಯಾಕ್ಸ್ ಡಿಪಾರ್ಟ್ಮೆಂಟ್‌ನಿಂದ ನೊಟೀಸ್ ಬರ್ತಿದೆ. GST ಇಲಾಖೆಯವರೇ ಈ ಕೆಲಸ ಮಾಡ್ತಿದ್ದಾರೆ. ಕೆಲವರು ಈ ವಿಚಾರದಲ್ಲಿ ತಪ್ಪು ಮಾಹಿತಿ ಕೊಡ್ತಿದ್ದಾರೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ರೆ ಸರಿಯಾದ ಮಾಹಿತಿ ಕೊಡಬೇಕು. ಕಮರ್ಷಿಯಲ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ ಕರ್ನಾಟಕ ರಾಜ್ಯ ಸರ್ಕಾರದ ಮಾನದಂಡ ಅನುಸರಿಸುವುದಿಲ್ಲ. ಕೇಂದ್ರ ಸರ್ಕಾರದ ಮಾನದಂಡ ಅನುಸರಿಸುತ್ತದೆ. ಸಣ್ಣ ವ್ಯಾಪಾರಿಗಳಿಗೆ GST ಹಾಕಿರೋದು ರಾಜ್ಯ ಸರ್ಕಾರ ಅಲ್ಲ, ಕೇಂದ್ರ ಸರ್ಕಾರ. ರಾಜ್ಯ ಸರ್ಕಾರದ ವ್ಯಾಪ್ತಿಗೆ GST ಬರೋದಿಲ್ಲ. ಈ ಹಿಂದೆ ಪಾರ್ಲಿಮೆಂಟ್‌ನಲ್ಲಿ ರಾಹುಲ್ ಗಾಂಧಿ ಅವರು ಇದನ್ನೇ ಹೇಳಿದ್ದರು. GST ತಂದು ಜನ ಸಾಮಾನ್ಯರ ಬಳಿ ಪಿಕ್ ಪ್ಯಾಕೇಟ್ ಮಾಡಿದ್ದಾರೆ ಎಂದು ಹೇಳಿದ್ದರು. ಅದು ಇವಾಗ ನಿಜವಾಗಿದೆ. ಇಂದು ವಸ್ತುಗಳಿಗೆ 7 ಬಾರಿ ಟ್ಯಾಕ್ಸ್ ಬೀಳುತ್ತಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಿ ಮೋದಿ ಅವರಿಗೆ ಮಾನ ಮರ್ಯಾದೆ ಇದ್ರೆ ಇದಕ್ಕೆ ಸ್ಪಷ್ಟನೆ ಕೊಡಿ. ಸಣ್ಣ ವ್ಯಾಪಾರಿಗಳಿಗೆ ಬರೆ ಎಳೆಯುವ ಕೆಲಸ ಮಾಡಬೇಡಿ. ಬಿಜೆಪಿ ನಾಯಕರು ಮಿಸ್ ಲೀಡ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಸಣ್ಣ ವ್ಯಾಪಾರಿಗಳು ನಾಳೆ ನಡೆಸುವ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದವರು ಕೂಡ ಬೆಂಬಲ ನೀಡಲಿದ್ದೇವೆ.
ದಯಮಾಡಿ ಪ್ರತಿಭಟನೆ ಮಾಡಿ ನಾನು ನಿಮಗೆ ಸಹಕಾರ ನೀಡುತ್ತೇವೆ. ರಾಜ್ಯ ಸರಕಾರ ಟ್ಯಾಕ್ಸ್ ಹಾಕುತ್ತಿಲ್ಲ ಕೇಂದ್ರ ಸರಕಾರ ಮಾಡಿರುವ ಕೆಲಸಕ್ಕೆ ಪ್ರತಿಭಟನೆ ಮಾಡಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

1 hour ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

2 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

3 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

4 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

9 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

9 hours ago