ಮೈಸೂರು ನಗರ

ಸಣ್ಣ ವ್ಯಾಪಾರಿಗಳಿಗೆ GST ಹಾಕಿರೋದು ಕೇಂದ್ರ ಸರ್ಕಾರ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿ

ಮೈಸೂರು: ಕಮರ್ಷಿಯಲ್ ಟ್ಯಾಕ್ಸ್ ವಿಚಾರದಲ್ಲಿ ಜನರಿಗೆ ಸತ್ಯಾ-ಸತ್ಯತೆ ತಿಳಿಸಲು ಮುಂದಾಗಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, GST ಕಚೇರಿಗೆ ಬಂದಿದ್ದೇವೆ. ಕಳೆದ ಒಂದು ವಾರದಿಂದ ಸಣ್ಣ ವ್ಯಾಪಾರಸ್ಥರಿಗೆ ಕಮರ್ಷಿಯಲ್ ಟ್ಯಾಕ್ಸ್ ಡಿಪಾರ್ಟ್ಮೆಂಟ್‌ನಿಂದ ನೊಟೀಸ್ ಬರ್ತಿದೆ. GST ಇಲಾಖೆಯವರೇ ಈ ಕೆಲಸ ಮಾಡ್ತಿದ್ದಾರೆ. ಕೆಲವರು ಈ ವಿಚಾರದಲ್ಲಿ ತಪ್ಪು ಮಾಹಿತಿ ಕೊಡ್ತಿದ್ದಾರೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ರೆ ಸರಿಯಾದ ಮಾಹಿತಿ ಕೊಡಬೇಕು. ಕಮರ್ಷಿಯಲ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ ಕರ್ನಾಟಕ ರಾಜ್ಯ ಸರ್ಕಾರದ ಮಾನದಂಡ ಅನುಸರಿಸುವುದಿಲ್ಲ. ಕೇಂದ್ರ ಸರ್ಕಾರದ ಮಾನದಂಡ ಅನುಸರಿಸುತ್ತದೆ. ಸಣ್ಣ ವ್ಯಾಪಾರಿಗಳಿಗೆ GST ಹಾಕಿರೋದು ರಾಜ್ಯ ಸರ್ಕಾರ ಅಲ್ಲ, ಕೇಂದ್ರ ಸರ್ಕಾರ. ರಾಜ್ಯ ಸರ್ಕಾರದ ವ್ಯಾಪ್ತಿಗೆ GST ಬರೋದಿಲ್ಲ. ಈ ಹಿಂದೆ ಪಾರ್ಲಿಮೆಂಟ್‌ನಲ್ಲಿ ರಾಹುಲ್ ಗಾಂಧಿ ಅವರು ಇದನ್ನೇ ಹೇಳಿದ್ದರು. GST ತಂದು ಜನ ಸಾಮಾನ್ಯರ ಬಳಿ ಪಿಕ್ ಪ್ಯಾಕೇಟ್ ಮಾಡಿದ್ದಾರೆ ಎಂದು ಹೇಳಿದ್ದರು. ಅದು ಇವಾಗ ನಿಜವಾಗಿದೆ. ಇಂದು ವಸ್ತುಗಳಿಗೆ 7 ಬಾರಿ ಟ್ಯಾಕ್ಸ್ ಬೀಳುತ್ತಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಿ ಮೋದಿ ಅವರಿಗೆ ಮಾನ ಮರ್ಯಾದೆ ಇದ್ರೆ ಇದಕ್ಕೆ ಸ್ಪಷ್ಟನೆ ಕೊಡಿ. ಸಣ್ಣ ವ್ಯಾಪಾರಿಗಳಿಗೆ ಬರೆ ಎಳೆಯುವ ಕೆಲಸ ಮಾಡಬೇಡಿ. ಬಿಜೆಪಿ ನಾಯಕರು ಮಿಸ್ ಲೀಡ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಸಣ್ಣ ವ್ಯಾಪಾರಿಗಳು ನಾಳೆ ನಡೆಸುವ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದವರು ಕೂಡ ಬೆಂಬಲ ನೀಡಲಿದ್ದೇವೆ.
ದಯಮಾಡಿ ಪ್ರತಿಭಟನೆ ಮಾಡಿ ನಾನು ನಿಮಗೆ ಸಹಕಾರ ನೀಡುತ್ತೇವೆ. ರಾಜ್ಯ ಸರಕಾರ ಟ್ಯಾಕ್ಸ್ ಹಾಕುತ್ತಿಲ್ಲ ಕೇಂದ್ರ ಸರಕಾರ ಮಾಡಿರುವ ಕೆಲಸಕ್ಕೆ ಪ್ರತಿಭಟನೆ ಮಾಡಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

2 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

16 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

16 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

16 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

16 hours ago