ಮೈಸೂರು ನಗರ

ಮೈಸೂರು ಮುಡಾದಲ್ಲಿ ಅಕ್ರಮ ಆಗಿರೋದು ನಿಜ: ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಬಂಧನವನ್ನು ಸ್ವಾಗತಿಸಿದರು. ನಾನು ಈ ಹಿಂದೆಯೇ ಹೇಳಿದ್ದೆ. ಮುಡಾದಲ್ಲಿ ಅಕ್ರಮ ಆಗಿರೋದು ನಿಜ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಅನೇಕರ ಬಂಧನ ಆಗಬೇಕು.

ಈ ಹಿಂದಿನ ಅಧ್ಯಕ್ಷರು, ಆಯುಕ್ತರು, ಅಧಿಕಾರಿಗಳ ಬಂಧನ ಆಗಬೇಕು. ಅಕ್ರಮವಾಗಿ ಸಾವಿರಾರು ಸೈಟುಗಳನ್ನು ಹಂಚಿದ್ದಾರೆ. ಕೇವಲ ದಿನೇಶ್ ಕುಮಾರ್ ಬಂಧನ ಆದ್ರೆ ಸಾಲಲ್ಲ. ಇನ್ನು ಅನೇಕರ ವಿರುದ್ಧ ತನಿಖೆ ಆಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಡೆಯುತ್ತಿರುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿ : ಎಸ್‌ಟಿ ಪಟ್ಟಿಗೆ ಕುರುಬ ಸಮುದಾಯ ಸೇರ್ಪಡೆ ವಿಚಾರ: ಸಂಸದ ಯದುವೀರ್‌ ಒಡೆಯರ್‌ ಅಸಮಾಧಾನ

ಇನ್ನು ಕೆ.ಆರ್.ಮೊಹಲ್ಲಾದ ಗಾಡಿ ಚೌಕ ದರ್ಗಾ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಲ್ಲಿ ಈಗಾಗಲೇ ದರ್ಗಾವಿದೆ. ಇನ್ನೊಂದು ದರ್ಗಾಕ್ಕೆ ಆಯುಕ್ತರು ಯಾಕೆ ನೋಟಿಫಿಕೇಷನ್ ಕೊಟ್ಟಿದ್ದಾರೆ?‌ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲಿ ಇರುವ ದರ್ಗಾದ ಬಗ್ಗೆ ನಾವು ಪ್ರಶ್ನೆ ಮಾಡಲ್ಲ. ಅದು ಅಕ್ರಮ ಸಕ್ರಮ ಅದನ್ನು ಈಗ ಚರ್ಚೆ ಮಾಡಲ್ಲ.

ದರ್ಗಾ ಇದ್ರು ಕೂಡ ಇನ್ನೊಂದು ದರ್ಗಾ ಯಾಕೆ ಅನ್ನೋದು ನಮ್ಮ ಪ್ರಶ್ನೆ. ಅಲ್ಲಿ ಆಟೋಗಳನ್ನು ನಿಲ್ಲಿಸುತ್ತಾರೆ. ಬೆಂಕಿ ಹಚ್ಚಿ ನಮ್ಮ ಮೇಲೆ ಹಾಕಿದ್ರೆ ಯಾರು ಹೊಣೆ? ಈ ಬಗ್ಗೆ ಕಮಿಷನರ್‌ಗೆ ದೂರು ಕೊಡುತ್ತೇನೆ. ಈ ಕೂಡಲೇ ಅಲ್ಲಿ ಇರುವ ಎಲ್ಲವನ್ನೂ ಖಾಲಿ ಮಾಡಿಸಬೇಕು. ಒಂದು ಧಾರ್ಮಿಕ ಕೇಂದ್ರವಿದೆ. ಅದನ್ನು ಬಿಟ್ಟು ಮಿಕ್ಕಿದ್ದು ಏನು ಕೂಡ ಅಲ್ಲಿರೋದು ಬೇಡ. ದರ್ಗಾ ಇರುವ ಬಗ್ಗೆ ಯಾವ ಮ್ಯಾಪ್‌ನಲ್ಲೂ ಉಲ್ಲೇಖ ಇಲ್ಲ. ಏನಾದ್ರೂ ಇದ್ರೆ ದಾಖಲೆಗಳನ್ನು ಕೊಡಲಿ ಎಂದು ಸವಾಲು ಹಾಕಿದರು.

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

8 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

8 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

9 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

10 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

11 hours ago