shreevathsav
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನವನ್ನು ಸ್ವಾಗತಿಸಿದರು. ನಾನು ಈ ಹಿಂದೆಯೇ ಹೇಳಿದ್ದೆ. ಮುಡಾದಲ್ಲಿ ಅಕ್ರಮ ಆಗಿರೋದು ನಿಜ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಅನೇಕರ ಬಂಧನ ಆಗಬೇಕು.
ಈ ಹಿಂದಿನ ಅಧ್ಯಕ್ಷರು, ಆಯುಕ್ತರು, ಅಧಿಕಾರಿಗಳ ಬಂಧನ ಆಗಬೇಕು. ಅಕ್ರಮವಾಗಿ ಸಾವಿರಾರು ಸೈಟುಗಳನ್ನು ಹಂಚಿದ್ದಾರೆ. ಕೇವಲ ದಿನೇಶ್ ಕುಮಾರ್ ಬಂಧನ ಆದ್ರೆ ಸಾಲಲ್ಲ. ಇನ್ನು ಅನೇಕರ ವಿರುದ್ಧ ತನಿಖೆ ಆಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಡೆಯುತ್ತಿರುತ್ತದೆ ಎಂದು ಎಚ್ಚರಿಕೆ ನೀಡಿದರು.
ಇದನ್ನು ಓದಿ : ಎಸ್ಟಿ ಪಟ್ಟಿಗೆ ಕುರುಬ ಸಮುದಾಯ ಸೇರ್ಪಡೆ ವಿಚಾರ: ಸಂಸದ ಯದುವೀರ್ ಒಡೆಯರ್ ಅಸಮಾಧಾನ
ಇನ್ನು ಕೆ.ಆರ್.ಮೊಹಲ್ಲಾದ ಗಾಡಿ ಚೌಕ ದರ್ಗಾ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಲ್ಲಿ ಈಗಾಗಲೇ ದರ್ಗಾವಿದೆ. ಇನ್ನೊಂದು ದರ್ಗಾಕ್ಕೆ ಆಯುಕ್ತರು ಯಾಕೆ ನೋಟಿಫಿಕೇಷನ್ ಕೊಟ್ಟಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲಿ ಇರುವ ದರ್ಗಾದ ಬಗ್ಗೆ ನಾವು ಪ್ರಶ್ನೆ ಮಾಡಲ್ಲ. ಅದು ಅಕ್ರಮ ಸಕ್ರಮ ಅದನ್ನು ಈಗ ಚರ್ಚೆ ಮಾಡಲ್ಲ.
ದರ್ಗಾ ಇದ್ರು ಕೂಡ ಇನ್ನೊಂದು ದರ್ಗಾ ಯಾಕೆ ಅನ್ನೋದು ನಮ್ಮ ಪ್ರಶ್ನೆ. ಅಲ್ಲಿ ಆಟೋಗಳನ್ನು ನಿಲ್ಲಿಸುತ್ತಾರೆ. ಬೆಂಕಿ ಹಚ್ಚಿ ನಮ್ಮ ಮೇಲೆ ಹಾಕಿದ್ರೆ ಯಾರು ಹೊಣೆ? ಈ ಬಗ್ಗೆ ಕಮಿಷನರ್ಗೆ ದೂರು ಕೊಡುತ್ತೇನೆ. ಈ ಕೂಡಲೇ ಅಲ್ಲಿ ಇರುವ ಎಲ್ಲವನ್ನೂ ಖಾಲಿ ಮಾಡಿಸಬೇಕು. ಒಂದು ಧಾರ್ಮಿಕ ಕೇಂದ್ರವಿದೆ. ಅದನ್ನು ಬಿಟ್ಟು ಮಿಕ್ಕಿದ್ದು ಏನು ಕೂಡ ಅಲ್ಲಿರೋದು ಬೇಡ. ದರ್ಗಾ ಇರುವ ಬಗ್ಗೆ ಯಾವ ಮ್ಯಾಪ್ನಲ್ಲೂ ಉಲ್ಲೇಖ ಇಲ್ಲ. ಏನಾದ್ರೂ ಇದ್ರೆ ದಾಖಲೆಗಳನ್ನು ಕೊಡಲಿ ಎಂದು ಸವಾಲು ಹಾಕಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…