ಮೈಸೂರು ನಗರ

KRS ಅಣೆಕಟ್ಟೆ ನಿರ್ಮಾಣಕ್ಕೆ ಟಿಪ್ಪು ಅಡಿಗಲ್ಲು ಇಟ್ಟಿದ್ದು ಸತ್ಯ: ಎಂ.ಲಕ್ಷ್ಮಣ್‌

ಮೈಸೂರು: ಕೆಆರ್‌ಎಸ್‌ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌ ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣೆ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ. ಮಹದೇವಪ್ಪ ಹೇಳಿದ್ದು ನೂರಕ್ಕೆ ನೂರರಷ್ಟು ಸತ್ಯ.
ಅಣೆಕಟ್ಟು ಕಟ್ಟಿದ್ದು ಮಹಾರಾಜರು. ಆದರೆ, ಅದಕ್ಕೆ ಮೊದಲು ಅದೇ ಜಾಗದಲ್ಲಿ ಬ್ಯಾರೇಜ್ ಕಟ್ಟಿದ್ದು ಟಿಪ್ಪು ಸುಲ್ತಾನ್.‌ ಮೋವಿ ಡ್ಯಾಂ ಎಂದು ಹೆಸರಿಟ್ಟು 6 ಟಿಎಂಸಿ ನೀರು ಸಂಗ್ರಹಣದ ಬ್ಯಾರೇಜ್ ಅನ್ನು ಟಿಪ್ಪು ಕಟ್ಟಿದ್ದರು. ಶ್ರೀರಂಗಪಟ್ಟಣ, ಕೆ.ಆರ್.ನಗರ ಭಾಗಕ್ಕೆ ಇದರಿಂದ ನೀರು ಹರಿಸುತ್ತಿದ್ದರು. ನಂತರ ಇದೇ ಜಾಗದಲ್ಲೇ ಕೆಆರ್‌ಎಸ್ ಅಣೆಕಟ್ಟು ಕಟ್ಟಲಾಗಿದೆ. ಇದಕ್ಕೆ ಶಾಸನದ ಸಾಕ್ಷಿ ಕೂಡ ಇದೆ. ನಾಲ್ವಡಿಗೂ ಹಾಗೂ ಹಾಲಿ ಸಂಸದರಿಗೆ ಹೋಲಿಕೆ ಬೇಡ.‌ ಇವರು ರಾಜಕಾರಣಕ್ಕಾಗಿ ಬಂದವರು ಎಂದು ಸಂಸದ ಯದುವೀರ್‌ ಒಡೆಯರ್‌ಗೆ ಟಾಂಗ್‌ ಕೊಟ್ಟರು.

ಇನ್ನು ನಾಲ್ವಡಿಗಿಂತ ನಮ್ಮ ತಂದೆ ಹೆಚ್ಚು ಕೆಲಸ ಮಾಡಿದ್ದಾರೆ ಎಂಬ ಸಿಎಂ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನೂ ಸಮರ್ಥಿಸಿಕೊಂಡ ಅವರು, ಸಿದ್ದರಾಮಯ್ಯ ಮೈಸೂರಿಗೆ ನೀರು ಕೊಟ್ಟಿದ್ದಾರೆ, ‌ಆಸ್ಪತ್ರೆ ಕಟ್ಟಿಸಿದ್ದಾರೆ, ರಸ್ತೆ ಮಾಡಿಸಿದ್ದಾರೆ. ರಾಜ ಪ್ರಭುತ್ವದಲ್ಲಿ ನಾಲ್ವಡಿ ಅವರು ಕೆಲಸ ಮಾಡಿದರು. ಪ್ರಜಾಪ್ರಭುತ್ವದಲ್ಲಿ ಸಿದ್ದರಾಮಯ್ಯ ಮೈಸೂರಿಗೆ ಅತೀಹೆಚ್ಚು ಕೆಲಸ ಮಾಡಿದ್ದಾರೆ. ಯತೀಂದ್ರ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ ಎಂದರು.

ಇನ್ನು ಸಂಸತ್‌ನಲ್ಲಿ ನಡೆದ ಸ್ಮೋಕ್ ಬಾಂಬ್ ಘಟನೆಯಲ್ಲಿ ಪೊಲೀಸರು ಪ್ರತಾಪ್ ಸಿಂಹ ಮೊಬೈಲ್ ಜಪ್ತಿ ಮಾಡಿದ್ದರು. ಆ ಮೊಬೈಲ್ ಬಗ್ಗೆ ಎಸ್ಐಟಿಗೆ ತನಿಖೆ ನಡೆಸಲು ಕೊಟ್ಟರೆ ಪ್ರಜ್ವಲ್ ರೇವಣ್ಣ ಒಳಗೆ ಹೋದಂತೆ ಪ್ರತಾಪ್ ಸಿಂಹ ಕೂಡ ಒಳಗೆ ಹೋಗುತ್ತಾರೆ. ನನ್ನ ಬಳಿಯೂ ಈ ಬಗ್ಗೆ ಆಧಾರಗಳಿವೆ. ಅವರ ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ನಗ್ನ ವಿಡಿಯೋ ಇವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಗಂಭೀರ ಆರೋಪ ಮಾಡಿದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

9 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

10 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

10 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

10 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

10 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

10 hours ago