ಮೈಸೂರು ನಗರ

KRS ಅಣೆಕಟ್ಟೆ ನಿರ್ಮಾಣಕ್ಕೆ ಟಿಪ್ಪು ಅಡಿಗಲ್ಲು ಇಟ್ಟಿದ್ದು ಸತ್ಯ: ಎಂ.ಲಕ್ಷ್ಮಣ್‌

ಮೈಸೂರು: ಕೆಆರ್‌ಎಸ್‌ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌ ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣೆ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ. ಮಹದೇವಪ್ಪ ಹೇಳಿದ್ದು ನೂರಕ್ಕೆ ನೂರರಷ್ಟು ಸತ್ಯ.
ಅಣೆಕಟ್ಟು ಕಟ್ಟಿದ್ದು ಮಹಾರಾಜರು. ಆದರೆ, ಅದಕ್ಕೆ ಮೊದಲು ಅದೇ ಜಾಗದಲ್ಲಿ ಬ್ಯಾರೇಜ್ ಕಟ್ಟಿದ್ದು ಟಿಪ್ಪು ಸುಲ್ತಾನ್.‌ ಮೋವಿ ಡ್ಯಾಂ ಎಂದು ಹೆಸರಿಟ್ಟು 6 ಟಿಎಂಸಿ ನೀರು ಸಂಗ್ರಹಣದ ಬ್ಯಾರೇಜ್ ಅನ್ನು ಟಿಪ್ಪು ಕಟ್ಟಿದ್ದರು. ಶ್ರೀರಂಗಪಟ್ಟಣ, ಕೆ.ಆರ್.ನಗರ ಭಾಗಕ್ಕೆ ಇದರಿಂದ ನೀರು ಹರಿಸುತ್ತಿದ್ದರು. ನಂತರ ಇದೇ ಜಾಗದಲ್ಲೇ ಕೆಆರ್‌ಎಸ್ ಅಣೆಕಟ್ಟು ಕಟ್ಟಲಾಗಿದೆ. ಇದಕ್ಕೆ ಶಾಸನದ ಸಾಕ್ಷಿ ಕೂಡ ಇದೆ. ನಾಲ್ವಡಿಗೂ ಹಾಗೂ ಹಾಲಿ ಸಂಸದರಿಗೆ ಹೋಲಿಕೆ ಬೇಡ.‌ ಇವರು ರಾಜಕಾರಣಕ್ಕಾಗಿ ಬಂದವರು ಎಂದು ಸಂಸದ ಯದುವೀರ್‌ ಒಡೆಯರ್‌ಗೆ ಟಾಂಗ್‌ ಕೊಟ್ಟರು.

ಇನ್ನು ನಾಲ್ವಡಿಗಿಂತ ನಮ್ಮ ತಂದೆ ಹೆಚ್ಚು ಕೆಲಸ ಮಾಡಿದ್ದಾರೆ ಎಂಬ ಸಿಎಂ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನೂ ಸಮರ್ಥಿಸಿಕೊಂಡ ಅವರು, ಸಿದ್ದರಾಮಯ್ಯ ಮೈಸೂರಿಗೆ ನೀರು ಕೊಟ್ಟಿದ್ದಾರೆ, ‌ಆಸ್ಪತ್ರೆ ಕಟ್ಟಿಸಿದ್ದಾರೆ, ರಸ್ತೆ ಮಾಡಿಸಿದ್ದಾರೆ. ರಾಜ ಪ್ರಭುತ್ವದಲ್ಲಿ ನಾಲ್ವಡಿ ಅವರು ಕೆಲಸ ಮಾಡಿದರು. ಪ್ರಜಾಪ್ರಭುತ್ವದಲ್ಲಿ ಸಿದ್ದರಾಮಯ್ಯ ಮೈಸೂರಿಗೆ ಅತೀಹೆಚ್ಚು ಕೆಲಸ ಮಾಡಿದ್ದಾರೆ. ಯತೀಂದ್ರ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ ಎಂದರು.

ಇನ್ನು ಸಂಸತ್‌ನಲ್ಲಿ ನಡೆದ ಸ್ಮೋಕ್ ಬಾಂಬ್ ಘಟನೆಯಲ್ಲಿ ಪೊಲೀಸರು ಪ್ರತಾಪ್ ಸಿಂಹ ಮೊಬೈಲ್ ಜಪ್ತಿ ಮಾಡಿದ್ದರು. ಆ ಮೊಬೈಲ್ ಬಗ್ಗೆ ಎಸ್ಐಟಿಗೆ ತನಿಖೆ ನಡೆಸಲು ಕೊಟ್ಟರೆ ಪ್ರಜ್ವಲ್ ರೇವಣ್ಣ ಒಳಗೆ ಹೋದಂತೆ ಪ್ರತಾಪ್ ಸಿಂಹ ಕೂಡ ಒಳಗೆ ಹೋಗುತ್ತಾರೆ. ನನ್ನ ಬಳಿಯೂ ಈ ಬಗ್ಗೆ ಆಧಾರಗಳಿವೆ. ಅವರ ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ನಗ್ನ ವಿಡಿಯೋ ಇವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಗಂಭೀರ ಆರೋಪ ಮಾಡಿದರು.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

6 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

6 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

6 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

7 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

8 hours ago