ಮೈಸೂರು: ಕೆಆರ್ಎಸ್ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣೆ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ. ಮಹದೇವಪ್ಪ ಹೇಳಿದ್ದು ನೂರಕ್ಕೆ ನೂರರಷ್ಟು ಸತ್ಯ.
ಅಣೆಕಟ್ಟು ಕಟ್ಟಿದ್ದು ಮಹಾರಾಜರು. ಆದರೆ, ಅದಕ್ಕೆ ಮೊದಲು ಅದೇ ಜಾಗದಲ್ಲಿ ಬ್ಯಾರೇಜ್ ಕಟ್ಟಿದ್ದು ಟಿಪ್ಪು ಸುಲ್ತಾನ್. ಮೋವಿ ಡ್ಯಾಂ ಎಂದು ಹೆಸರಿಟ್ಟು 6 ಟಿಎಂಸಿ ನೀರು ಸಂಗ್ರಹಣದ ಬ್ಯಾರೇಜ್ ಅನ್ನು ಟಿಪ್ಪು ಕಟ್ಟಿದ್ದರು. ಶ್ರೀರಂಗಪಟ್ಟಣ, ಕೆ.ಆರ್.ನಗರ ಭಾಗಕ್ಕೆ ಇದರಿಂದ ನೀರು ಹರಿಸುತ್ತಿದ್ದರು. ನಂತರ ಇದೇ ಜಾಗದಲ್ಲೇ ಕೆಆರ್ಎಸ್ ಅಣೆಕಟ್ಟು ಕಟ್ಟಲಾಗಿದೆ. ಇದಕ್ಕೆ ಶಾಸನದ ಸಾಕ್ಷಿ ಕೂಡ ಇದೆ. ನಾಲ್ವಡಿಗೂ ಹಾಗೂ ಹಾಲಿ ಸಂಸದರಿಗೆ ಹೋಲಿಕೆ ಬೇಡ. ಇವರು ರಾಜಕಾರಣಕ್ಕಾಗಿ ಬಂದವರು ಎಂದು ಸಂಸದ ಯದುವೀರ್ ಒಡೆಯರ್ಗೆ ಟಾಂಗ್ ಕೊಟ್ಟರು.
ಇನ್ನು ನಾಲ್ವಡಿಗಿಂತ ನಮ್ಮ ತಂದೆ ಹೆಚ್ಚು ಕೆಲಸ ಮಾಡಿದ್ದಾರೆ ಎಂಬ ಸಿಎಂ ಪುತ್ರ ಹಾಗೂ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನೂ ಸಮರ್ಥಿಸಿಕೊಂಡ ಅವರು, ಸಿದ್ದರಾಮಯ್ಯ ಮೈಸೂರಿಗೆ ನೀರು ಕೊಟ್ಟಿದ್ದಾರೆ, ಆಸ್ಪತ್ರೆ ಕಟ್ಟಿಸಿದ್ದಾರೆ, ರಸ್ತೆ ಮಾಡಿಸಿದ್ದಾರೆ. ರಾಜ ಪ್ರಭುತ್ವದಲ್ಲಿ ನಾಲ್ವಡಿ ಅವರು ಕೆಲಸ ಮಾಡಿದರು. ಪ್ರಜಾಪ್ರಭುತ್ವದಲ್ಲಿ ಸಿದ್ದರಾಮಯ್ಯ ಮೈಸೂರಿಗೆ ಅತೀಹೆಚ್ಚು ಕೆಲಸ ಮಾಡಿದ್ದಾರೆ. ಯತೀಂದ್ರ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ ಎಂದರು.
ಇನ್ನು ಸಂಸತ್ನಲ್ಲಿ ನಡೆದ ಸ್ಮೋಕ್ ಬಾಂಬ್ ಘಟನೆಯಲ್ಲಿ ಪೊಲೀಸರು ಪ್ರತಾಪ್ ಸಿಂಹ ಮೊಬೈಲ್ ಜಪ್ತಿ ಮಾಡಿದ್ದರು. ಆ ಮೊಬೈಲ್ ಬಗ್ಗೆ ಎಸ್ಐಟಿಗೆ ತನಿಖೆ ನಡೆಸಲು ಕೊಟ್ಟರೆ ಪ್ರಜ್ವಲ್ ರೇವಣ್ಣ ಒಳಗೆ ಹೋದಂತೆ ಪ್ರತಾಪ್ ಸಿಂಹ ಕೂಡ ಒಳಗೆ ಹೋಗುತ್ತಾರೆ. ನನ್ನ ಬಳಿಯೂ ಈ ಬಗ್ಗೆ ಆಧಾರಗಳಿವೆ. ಅವರ ಮೊಬೈಲ್ನಲ್ಲಿ ನಗ್ನ ಚಿತ್ರಗಳು, ನಗ್ನ ವಿಡಿಯೋ ಇವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಗಂಭೀರ ಆರೋಪ ಮಾಡಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…